ತುಮಕೂರು

ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ ೩ ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :-
ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊAಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆAದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿAದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ.
ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಸಾರ್ವಜನಿಕರಲ್ಲಿ ಮನವಿ :-
ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು, ಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು. ನದಿ/ಹಳ್ಳ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ಸೆಲ್ಫಿಗಳನ್ನು ತೆಗೆಯಬಾರದು. ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು. ಗುಡುಗು-ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು. ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದAತೆ ಜನ ಸಂದಣಿಯಾಗದAತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

(Visited 1 times, 1 visits today)