ತುಮಕೂರು: ಸರ್ಕಾರಿ ಅಧಿಕಾರಿ/ನೌಕರರು ನಿಗಧಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಕಚೇರಿಯ ಅಧಿಕಾರಿ/ಸಿಬ್ಬಂದಿಗಳೊAದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ-ಕಾರ್ಯಗಳನ್ನು ನಿಗಧಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಅಧಿಕಾರಿ/ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ-ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

(Visited 1 times, 1 visits today)