ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು ಈ ಸಂದಭದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿಸAವಿಧಾನದ ಆಶಯವಾದ ಕಲ್ಯಾಣ ರಾಜ್ಯದ ಪರಿಕಲ್ಪನೆಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪರ್ಧೇಗೆ ಇಳಿದು ಬೆಲೆ ಏರಿಕೆ ಮಾಡುತ್ತಿವೆ. ಈ ಬೆಲೆ ಏರಿಕೆಯಿಂದ ಬಡವರಿಗೆ ಪ್ರತಿನಿತ್ಯ ರಕ್ತ ಹೀರುತ್ತಿವೆ. ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಡವರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿವೆ. ಇದನ್ನು ಸ್ಲಂ ಜನಾಂದೋಲನ ಕರ್ನಾಟಕ ಖಂಡಿಸುತ್ತದೆ. ಜನವರಿ ೫-೨೦೨೫ ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಬಸ್ ದರವನ್ನು ಶೇಕ ೧೫% ರಷ್ಟು ಏರಿಕೆ ಮಾಡಿದೆ ಇನ್ನೊಂದೆಡೆ ವಿದ್ಯುತ್ ದರವನ್ನು ಮತ್ತೆ ಪರಷ್ಕರಣೆ ಮಾಡಲಾಗಿದೆ ಸದ್ಯಕ್ಕೆ ರಾಜ್ಯದಲ್ಲಿ ಗೃಹ ಜ್ಯೋತಿ ಇರುವುದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಮಸ್ಯೆ ಆಗದೇ ಇರಬಹುದು ಆದರೆ ಮುಂದೆ ಗೃಹಜೋತಿ ಯೋಜನೆ ಸ್ಥಗಿತಗೊಂಡರೆ ರಾಜ್ಯದ ಬಡವರ ಬದುಕು ನರಕವಾಗುವುದು ಖಂಡಿತ. ಆದ ಕಾರಣ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದ ಕೋಟ್ಯಂತರ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಯಾವುದೇ ಸಮಸ್ಯೆಗಳು ಆಗದೇ ಸಾಮಾಜಿಕ ನ್ಯಾಯದಡಿಯಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗಿದೆ, ಆಧರೆ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಕಷ್ಟಕರವಾಗಿದ್ದು ಕೂಡಲೇ ರಾಜ್ಯ ಸರ್ಕಾರ ಹಾಲು, ವಿದ್ಯುತ್, ಡಿಸೆಲ್, ಬಸ್ ಪ್ರಯಾಣ ದರ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿAದ ಒತ್ತಾಯಿಸುತ್ತದೆ ಎಂದರು.ನAತರ ಮಾತನಾಡಿದ ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯ ಅನುಪಮಾ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಜನಸಾಮಾನ್ಯರು ಅದರ ಲಾಭ ಪಡೆಯುತ್ತಿದ್ದಾರೆ. ಆದರೂ ಆಗ್ಗಾಗೆ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಪಂಚ ಗ್ಯಾರಂಟಿ ಯೋಜನೆ ಅದರ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ವೇಗದ ಬೆಲೆ ಏರಿಕೆ ಮಹಿಳೆಯರು ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ, ಪೌಷ್ಠಿಕ ವೃದ್ಧಿಗಾಗಿ ಆಹಾರ ಪದಾರ್ಥಗಳನ್ನು ಕೊಂಡು ತಿನ್ನಲು ಸಾಧ್ಯವಾಗದೇ ಅನೇಕ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಠಿಕತೆ ಹೆಚ್ಚಾಗುತ್ತಿದೆ. ಇದರ ಪರಿಣಾಮಗಳು ಮಾನವ ಸಂಕುಲದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಬಡವರಿಗೆ ಕೈಗೆಟಕುವ ದರದಲ್ಲಿ ಬೆಲೆ ಏರಿಕೆ ನಿಗಧಿಯಾಗಲಿ ಅವೈಜ್ಞಾನಿಕ ಬೆಲೆ ಏರಿಕೆ ಸರ್ಕಾರಗಳು ಕೈಬಿಡಬೇಕೆಂದರು.ಈ ಸಂದರ್ಭದಲ್ಲಿ ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್, ಪದಾಧಿಕಾರಿಗಳಾದ ಶಂಕರಯ್ಯ, ಜಾಬೀರ್ ಖಾನ್ ,ತಿರುಮಲಯ್ಯ, ಕೃಷ್ಣಮೂರ್ತಿ, ಧನಂಜಯ್, ಸುನಿಲ್, ಗಣೇಶ್, ಭಾರತಿನಗರ ಶಾರದಮ್ಮ,ಗಂಗ,ಕೆAಪಣ್ಣ, ಮಾಣಿಕ್ಯಮ್ಮ, ಮಾರಿಯಮ್ಮ ನಗರದ ಕೃಷ್ಣ, ಗೋಪಾಲ್, ಮಾರಿ, ರಾಜ, ಮಾಧವನ್ ನಿವೇಶನ ಹೋರಾಟ ಸಮಿತಿಯ ಮಂಗಳಮ್ಮ, ಪೂರ್ಣಿಮಾ, ಸುಧಾ, ರತ್ನಮ್ಮ, ರಂಗನಾಥ್, ಗುಲ್ನಾಜ್, ನರಸಿಂಹಮೂರ್ತಿ, ಪುಟ್ಟರಾಜು, ನೂರಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.