ಕೊರಟಗೆರೆ: ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು. ಪಟ್ಟಣದ ನವೀನ್ ಕಂಫಟ್ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನೂತನವಾಗಿ ಕೊರಟಗೆರೆ ಮಂಡಲ ಅಧ್ಯಕ್ಷರಿಗೆ ಅಭಿನಂದನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ಮಂಡಲ ಅಧ್ಯಕ್ಷ ಎನ್ನವುದು ಒಂದು ಹುದ್ದೆ ಪ್ರೋಟೋಕಾಲ್ ಅಷ್ಟೇ. ನಾನು ಕೂಡ ಒಬ್ಬ ಬೂತ್ ಸದಸ್ಯನಾಗಿ ಕೆಲಸ ಮಾಡುತ್ತೇನೆ. ಇಲ್ಲಿ ಯಾರು ಅಧ್ಯಕ್ಷರಲ್ಲ ಎಲ್ಲರೂ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ ಮುಂದೆ ಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ಪರ್ಧಿಸಿ ಬಿಜೆಪಿ ಪಕ್ಷವನ್ನ ನಮ್ಮ ಕ್ಷೇತ್ರದಲ್ಲಿ ಸದೃಢಗೊಳಿಸೋಣ ಎಂದು ತಿಳಿಸಿದರು. ನನಗೆ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಮುಖಂಡು ಹಾಗೂ ಕೊರಟಗೆರೆ ವಿಧಾನಸಭಾದ ಬಿಜೆಪಿ ಅಭ್ಯರ್ಥಿಯಾದ ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಬಿ.ಹೆಚ್.ಅನಿಲ್ಕುಮಾರ್ ಅವರು ಸಹಕಾರದಿಂದ…
Author: News Desk Benkiyabale
ತುಮಕೂರು: ಇಂದಿನ ಪರಸ್ಪರ ಸಂಪರ್ಕಿತ ಡಿಜಿಟಲ್ ಪರಿಸರದಲ್ಲಿ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ರಕ್ಷಿಸಲು ಸೈಬರ್ ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ ವೀರಯ್ಯ ಅವರು ಅಭಿಪ್ರಾಯಪಟ್ಟರು. ನಗರದ ಕ್ಯಾತಸಂದ್ರದ ಬಳಿಯಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿAಗ್ ನಲ್ಲಿ ಏರ್ಪಡಿಸಲಾಗಿದ್ದ ಒಂದು ವಾರದ ಪ್ರಾಧ್ಯಾಪಕರ ಪ್ರಗತಿ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ‘ಇ-ಆಡಳಿತದ ಸುರಕ್ಷತೆ, ಸೈಬರ್ ಭದ್ರತೆ ಸಮ್ಮೀಲನದ ವಸ್ತುಸ್ಥಿತಿ ಹಾಗೂ ಆಧುನಿಕ ಕಾಲಘಟ್ಟದ ತಂತ್ರಜ್ಞಾನದಲ್ಲಿ ಕೃತಕ ಬುದ್ದಿಮತ್ತೆ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಇಂಟರ್ನೆಟ್ ಜೀವನದ ಪ್ರತಿಯೊಂದು ಹಂತದಲ್ಲೂ ಅಗತ್ಯವಾಗಿದ್ದು, ಸೈಬರ್ ಭೀತಿಯ ಜೊತೆಗೆ ಸಂಬAಧಿಸಿದ ತೊಂದರೆಗಳು ವೇಗವಾಗಿ ಹೆಚ್ಚುತ್ತಿವೆ. ಪ್ರತಿಷ್ಠಿತ ವ್ಯಕ್ತಿಗಳು, ದೊಡ್ಡ ಸಂಸ್ಥೆಗಳು, ಹಾಗು ಸರ್ಕಾರಗಳೂ ಸಹ ಎಲ್ಲರೂ ಭದ್ರತೆಗೆ ಸಂಬAಧಿಸಿದ ಅಪಾಯಗಳನ್ನು ಎದುರಿಸುತ್ತಿವೆ ಎಂದ ಡಾ.ವಿವೇಕ ವೀರಯ್ಯ ಅವರು ಸೂಕ್ಷ್ಮ ಮಾಹಿತಿಯನ್ನು ಸುರಕ್ಷಿತವಾಗಿಡಲು ಮತ್ತು ಆನ್ಲೈನ್ ಚಟುವಟಿಕೆಗಳನ್ನು ರಕ್ಷಿಸಲು ಎಷ್ಟು ಅಗತ್ಯವಿದೆ ಎಂಬುದು ನಿರ್ಧರಿಸಬೇಕಾಗಿದೆ. ಸೈಬರ್ ದಾಳಿ…
ಹುಳಿಯಾರು: ಗ್ರಾಮಠಾಣ ವ್ಯಾಪ್ತಿಯಲ್ಲಿರುವ ನನ್ನ ನಿವೇಶನದ ಖಾತೆ ಮಾಡಿಸಲು ಹುಳಿಯಾರು ಪಟ್ಟಣ ಪಂಚಾಯ್ತಿಗೆ 2 ವರ್ಷಗಳಿಂದ ಅಲೆಯುತ್ತಿದ್ದೇನೆ. ಆದರೆ ಇದೂವರೆವಿಗೂ ಖಾತೆ ಆಗಿಲ್ಲ. ಯಾವಾಗ ಬಂದರೂ ಒಂದೊAದು ಸಬೂಬು ಹೇಳಿ ಕಳುಹಿಸುತ್ತಿದ್ದಾರೆ. ಗಂಡನ ಮನೆ ಹೊಸದುರ್ಗ ತಾಲೂಕಿನ ಶ್ರೀರಾಂಪುರದಿAದ ಪಂಚಾಯ್ತಿಗೆ ಅಲೆದು ಅಲೆದು ಸಾಕಾಗಿ ಹೋಗಿದೆ. ಮೇಲಧಿಕಾರಿಗಳು ಇನ್ನಾದರೂ ಖಾತೆ ಮಾಡಿಸಲು ನಿರ್ಲಕ್ಷಿö್ಯಸಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡು ನನಗೆ ಖಾತೆ ಮಾಡಿಸಿಕೊಟ್ಟು ಪುಣ್ಯಕಟ್ಟಿಕೊಳ್ಳಿ ಎಂದು ರೇಷ್ಮಾಬಾನು ಬುಧವಾರ ಮನವಿ ಮಾಡಿದ್ದಾರೆ. ಹುಳಿಯಾರಿನ ಗ್ರಾಮ ಠಾಣಾ ವ್ಯಾಪ್ತಿಯಲ್ಲಿನ ಲಿಂಗಾಯಿತರ ಬೀದಿಯ ಪಂಚಾಯ್ತಿ ಖಾತೆ ಸಂಖ್ಯೆ 325 ಅ.ಸಂ 204 ನಿವೇಶನವನ್ನು ನನ್ನ ತಾಯಿಯಿಂದ 14/8/2018 ರಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದೇನೆ. ಈ ನಿವೇಶನವನ್ನು ನನ್ನ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡಲು 2/2/23 ರಲ್ಲಿ ಪಂಚಾಯ್ತಿಗೆ ರಿಜಿಸ್ಟರ್ ಪ್ರತಿ, ಇಸಿ, ಆಧಾರ್ ಕಾರ್ಡ್, ಗ್ರಾಮಠಾಣಾ ನಕ್ಷೆ, ಕಂದಾಯ ರಸೀಧಿ ಹೀಗೆ ಎಲ್ಲವನ್ನು ಕೊಟ್ಟಿದ್ದೇನೆ. ಆದರೆ ಇಲ್ಲಿಯವರೆವಿಗೆ ಖಾತೆ ಮಾಡಿಕೊಟ್ಟಿಲ್ಲ. ಯಾವಾಗ ಬಂದರೂ ಸಿಬ್ಬಂದಿ ಇಲ್ಲ,…
ತುಮಕೂರು : ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ತಿಳಿಸಿದರು. ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ 5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೇಂದ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಗಮನದಲ್ಲಿಟ್ಟುಕೊಂಡು ಹಂಚಿಕೆ ಮಾಡಲಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ನಿರ್ಮಾಣ, ವಿದ್ಯುತ್ ಸೇರಿದಂತೆ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. “ತೆರಿಗೆ ಮೊದಲು-ಸೇವೆ ನಂತರ” ಎಂಬ ಧ್ಯೇಯವಾಕ್ಯದಡಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸಿ ಸರ್ಕಾರದ…
ತುಮಕೂರು: ಮತ್ಸö್ಯದರ್ಶಿನಿ ಹೋಟೆಲ್ ನಲ್ಲಿ ಕಳೆಪೆ ಗುಣಮಟ್ಟದ ಪದಾರ್ಥಗಳನ್ನು ಬಳಸುವ ಮೂಲಕ ಆಹಾರ ಗುಣಮಟ್ಟವನ್ನು ಕಡಿಮೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಹೋಟೆಲ್ನ ವ್ಯವಸ್ಥಾಪಕಿಯ ದುರ್ವರ್ತನೆಗೆ ಗ್ರಾಹಕರು ಬೇಸತ್ತಿದ್ದು, ಈಕೆಯ ವರ್ಗಾವಣೆಗೆ ಆಗ್ರಹಗಳು ಕೇಳಿ ಬರುತ್ತಿದೆ. ತುಮಕೂರು ವಿವಿಯ ಹಿಂದೆ ಸರ್ಕಾರದ ಮತ್ಸö್ಯ ದರ್ಶಿನಿ ಹೋಟೆಲ್ ಇದೆ. ಇಲ್ಲಿಗೆ ನಿತ್ಯ ನೂರಾರು ಜನರು ಊಟಕ್ಕೆಂದು ಬರುತ್ತಿದ್ದರು. ಆದರೆ, ಗ್ರಾಹಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದಕ್ಕೆ ಹೋಟೆಲ್ ವ್ಯವಸ್ಥಾಪಕಿ ಕಾವ್ಯಾ ಅವರ ಗ್ರಾಹಕರೊಂದಿಗಿನ ಅನುಚಿತ ವರ್ತನೆಯೇ ಮುಖ್ಯವಾದ ಕಾರಣವೆಂದು ಹೇಳಲಾಗಿದೆ. ರುಚಿ ಶುಚಿ ಇರದ ಊಟ: ಅಡುಗೆ ಮಾಡಿ ಬಡಿಸುವಲ್ಲಿ ಹಿಂದೆ ಇದ್ದಂತಹ ಶ್ರದ್ಧೆ ಈಗ ಇಲ್ಲವಾಗಿದೆ. ಸಾಂಬರು ರುಚಿ ಇರದ ಬಗ್ಗೆ ಗ್ರಾಹಕರು ಕೇಳಿದರೆ `ಬೇಕಾದರೆ ತಿನ್ನಬಹುದು, ಇಲ್ಲವಾದರೆ ನಡೆಯಿರಿ’ ಎಂಬ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಅಡುಗೆಗೆ ಬಳಸುವ ಆಹಾರ ಪದಾರ್ಥಗಳು ಕಡಿಮೆ ಬೆಲೆಗೆ ಕೊಳ್ಳಲಾಗುತ್ತಿದ್ದು, ಅತ್ಯಂತ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿ ಗ್ರಾಹಕರಿಗೆ…
ಚಿಕ್ಕನಾಯಕನಹಳ್ಳಿ; ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಲರ್ಜಿ ಔಷಧಿ ಕುಡಿದ ವಿದ್ಯಾರ್ಥಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ ಪಟ್ಟಣದ ಹೊರವಲಯದಲ್ಲಿರುವ ಮೇಲ್ನಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಧನುಷ್ ಎಂದು ತಿಳಿದುಬಂದಿದೆ ಇAದು ಬೆಳಿಗ್ಗೆ ರೂಮ್ನಲ್ಲಿ ತನ್ನ ಸಹಪಾಠಿಯ ತಿನ್ನಲು ತಂದಿಟ್ಟುಕೊAಡಿದ್ದ ಚಿಪ್ಸನ್ನು ಧನುಷ್ ತಿಂದ ಪರಿಣಾಮ ಅವನ ಸ್ನೇಹಿತ ಈ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತರುತ್ತೇನೆ ಎಂದು ಸಹಪಾಠಿ ಮತ್ತೊಬ್ಬ ವಿದ್ಯಾರ್ಥಿ ಹೇಳಿದರ ಪರಿಣಾಮ ಈ ವಿದ್ಯಾರ್ಥಿಗೆ ಭಯಪಟ್ಟು ಮೈ ಅಲರ್ಜಿಗೆ ತಂದಿಟ್ಟುಕೊAಡಿದ್ದ ಬೇರೆ ವಿದ್ಯಾರ್ಥಿಯ ಔಷಧಿಯನ್ನು ಈತ ಕುಡಿದ ಪರಿಣಾಮ ಯಾರಿಗೂ ತಿಳಿಸದೆ ಬೆಳಗ್ಗಿನ ತಿಂಡಿ ಮಧ್ಯಾಹ್ನದ ಊಟ ಸೇವಿಸಿದ ಪರಿಣಾಮ ಸಂಜೆ 4:00 ಹೊತ್ತಿಗೆ ಅವನ ದೇಹ ಅಸ್ವಸ್ಥ ಗೊಂಡಿದೆ ಅದಕ್ಕೆ ಕೂಡಲೇ ಧನುಷ್ ಎಂಬ ವಿದ್ಯಾರ್ಥಿಯನ್ನು ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿ ವಿದ್ಯಾರ್ಥಿಯ ಪೋಷಕರಿಗೂ ತಿಳಿಸಲಾಗಿದೆ ವಿದ್ಯಾರ್ಥಿ ಪರೀಕ್ಷಿಸಿದ ವೈದ್ಯ ಡಾ. ಉಮೇಶ್ ಕುಡಿದ ಒಂದು…
ಹೆಬ್ಬೂರು: ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ. ಹೋರಾಟಗಳಲ್ಲಿ ನಾವು ಸತ್ತರೆ ನಮ್ಮ ಮುಂದಿನ ಪೀಳಿಗೆ ಕನಸುಗಳನ್ನು ಸಾಕಾರಗೊಳಿಸಲಿದೆ ಎಂಬ ನಂಬಿಕೆ ನಮಗಿದೆ ಎಂದು ಮುಖಂಡರಾದ ಹೆತ್ತೇನಹಳ್ಳಿ ಮಂಜುನಾಥ್ ಅವರು ತಿಳಿಸಿದರು. ಹೋಬಳಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕಂಚಿನ ಪುತ್ಥಳಿ ನಿರ್ಮಾಣದ ಭೂಮಿ ಪೂಜೆಯನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಜುನಾಥ್, ಸಮ ಸಮಾಜಕ್ಕಾಗಿ ನಮ್ಮ ರಕ್ತದ ಕಣಕಣವೂ ಮಿಡಿಯುತ್ತಿದೆ. ಈ ನಾಡಿನ ಜನರಿಗಾಗಿ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧರಿದ್ದೇವೆ. ನಾವೆಲ್ಲರೂ ಜಾತಿ ಭೇದಗಳನ್ನು ಮರೆತು ಪರಸ್ಪರ ಕೈ ಹಿಡಿದು ಬದುಕೋಣ ಎಂದು ಸಾರಿದರು. ನಾವೆಲ್ಲಾ ಒಂದಾದಾಗ ಮಾತ್ರ ಈ ಸಾಮಾಜಿಕ ವ್ಯವಸ್ಥೆ ಸರಿಹೋಗುತ್ತದೆ. ಅಂಬೇಡ್ಕರ್ ಭಾರತದ ಕಣ್ತೆರೆಸಿದರು. ಆದರೆ, ಶ್ರೀವಾಲ್ಮೀಕಿ ಬದುಕಿನ ಮೌಲ್ಯಗಳನ್ನು ತಿಳಿಸಿಕೊಟ್ಟರು. ಇಂತಹ ದಾರ್ಶನಿಕರ ಮಾರ್ಗದರ್ಶನದಲ್ಲಿ…
ತುಮಕೂರು: ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಸೋಮವಾರ ತುಮುಲ್ನ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು. ನಂತರ ಮಾತನಾಡಿದ ಅವರು, ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಹಾಲು ಒಕ್ಕೂಟದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು. ಹಾಲು ಒಕ್ಕೂಟವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಜಿಲ್ಲೆಯ ಸಚಿವರುಗಳು, ಶಾಸಕರು ಹಾಗೂ ಹಾಲು ಒಕ್ಕೂಟದ ನಿರ್ದೇಶಕರುಗಳ ಸಲಹೆ, ಮಾರ್ಗದರ್ಶನದೊಂದಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು. ಹಾಲು ಒಕ್ಕೂಟದ ವತಿಯಿಂದ ರೈತರಿಗೆ ಏನೇನು ಅನುಕೂಲ ಮಾಡಲು ಸಾಧ್ಯವೋ ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ನಾಗೇಶ್ಬಾಬು, ಎಸ್.ಆರ್. ಗೌಡ, ಡಿ. ಕೃಷ್ಣಕುಮಾರ್, ಮಾದಿಹಳ್ಳಿ ಪ್ರಕಾಶ್, ನಂಜೇಗೌಡ, ಸಿ.ವಿ. ಮಹಲಿಂಗಯ್ಯ, ಸಿದ್ದಗಂಗಯ್ಯ, ಚಂದ್ರಶೇಖರೆಡ್ಡಿ, ತುಮುಲ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕಲ್ಲಹಳ್ಳಿ ದೇವರಾಜು,…
ತುಮಕೂರು : ರಾಷ್ಟçದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26ರ ಭಾನುವಾರ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥ ಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯ ಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು. ನಿಗಧಿತ ರೂಪು-ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ…
ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ, ತುಮುಲ್ ಅಧ್ಯಕ್ಷರನ್ನಾಗಿ ಚುನಾಯಿತರನ್ನು ಆಯ್ಕೆ ಮಾಡದೆ ನಾಮ ನಿರ್ದೇಶಕರಾಗಿದ್ದ ಶಾಸಕರನ್ನು ಮಾಡಿರುವುದು ರೈತರ ಪಾಲಿನ ಕರಾಳ ದಿನಗಳ ಆರಂಭ ಇದು ರೈತರ ಮುಖಕ್ಕೆ ಬಾರಿಸಿ ದಂತಾಗಿದೆ ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ತೀವ್ರವಾಗಿ ಟೀಕಿಸಿದರು. ಪಟ್ಟಣದ ನಂದಿನಿ ಭವನದ ಆವರಣದಲ್ಲಿ ನಡೆದ ತುಮುಲ್ ನಾ ಆಡಳಿತ ಮಂಡಳಿ ಚುನಾವಣೆಯಲ್ಲಿ ತಾಲೂಕಿನ ನಿರ್ದೇಶಕರಾಗಿ ಆಯ್ಕೆಯಾದ ಬಿಎನ್ ಶಿವಪ್ರಕಾಶ್ ರವರು ಆಯೋಜಿಸಿದ್ದ ಮತದಾರರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಿಲಾಂಜಲಿ ನೀಡಿ ಸಹಕಾರ ಕ್ಷೇತ್ರಗಳನ್ನು ಕುಟುಂಬದ ಸಂಸ್ಥೆಗಳನ್ನಾಗಿಸುವ ಹುನ್ನಾರಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಕೈಜೋಡಿಸಿ ಇರುವುದು ಇಡೀ ರೈತ ಸಮೂಹಕ್ಕೆ ಕಾಪಾಳ ಮೋಕ್ಷ ಮಾಡಿದಂತಾಗಿದೆ ಎಂದರು ಡಾ. ವರ್ಗೀಸ್ ಕುರಿಯನ್ ರವರ ಆಶಯವನ್ನು ಮಣ್ಣು ಪಾಲು ಮಾಡಿದ ಮಹನೀಯರ ನಡೆ ಕ್ಷಮಿಸಲಾರದೆಂದ ಅವರು ಹಾಲು ಒಕ್ಕೂಟದ ಎಲ್ಲಾ ವ್ಯವಸ್ಥೆಗಳು ಡೈರಿಗೆ ಹಾಲು ಹಾಕವ ರೈತರ ಹಕಾಗಿರಬೇಕೆನ್ನುವುದು ಕೊನೆ ಕುರಿಯನ್…