ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಲವಾರು ಸ್ಮಾರ್ಟ್ ಕಾಮಗಾರಿಗಳಲ್ಲಿ ಮಳೆನೀರುಗಾಲುವೆಗಳಿಗೆ ಪರಿಸರಸ್ನೇಹಿ ರೂಪ ನೀಡುವ ಕಾಮಗಾರಿಯೂ ಒಂದಾಗಿದ್ದು, ಸ್ಮಾರ್ಟ್ ಸಿಟಿ ಲಿಮಿಟೆಡ್ ಈ ಪ್ರಯತ್ನಕ್ಕೆ ಮುಂದಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರ ಪರಿಕಲ್ಪನೆಯಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಯೋಜನಾ ನಿರ್ವಹಣಾ ಸಲಹೆಗಾರ ಸಂಸ್ಥೆಯಾದ ಐಪಿಇ ಗ್ಲೋಬಲ್ ಉಸ್ತುವಾರಿಯಲ್ಲಿ ರೂಪುಗೊಳ್ಳುತ್ತಿರುವ ಈ ಕಾಮಗಾರಿಯು ಈಗಾಗಲೇ ಚಾಲನೆಯಲ್ಲಿದೆ. ತ್ಯಾಜ್ಯ ನೀರು ಸೇರದ ನೀರ್ಗಾಲುವೆ ನಿರ್ಮಾಣ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ರಿಂಗ್ ರಸ್ತೆಯ ಎರಡೂ ಬದಿ(14.2 ಕಿ.ಮೀ ಉದ್ದ)ಯಲ್ಲಿ ಈ ಪರಿಸರಸ್ನೇಹಿ ರೂಪ ಪಡೆಯಲು ಮಳೆನೀರುಗಾಲುವೆಗಳು ಸಿದ್ಧವಾಗಿವೆ. ಸದ್ಯ ಈ ಮಳೆನೀರುಗಾಲುವೆಗಳಲ್ಲಿ ತ್ಯಾಜ್ಯನೀರು ಹರಿಯುತ್ತಿದ್ದು, ಮಳೆಗಾಲದಲ್ಲೂ ಸ್ವಚ್ಛ ನೀರು ಹರಿಯುವ ದೃಶ್ಯ ಕಾಣಸಿಗದಾಗಿದೆ. ಅಲ್ಲದೆ ಮಳೆ ನೀರಿನೊಂದಿಗೆ ತ್ಯಾಜ್ಯ ನೀರು ಸೇರಿಕೊಂಡು ಹರಿವನ್ನು ಇನ್ನಷ್ಟು ಕಲುಷಿತಗೊಳಿಸುತ್ತಿದೆ. ಈ ಸಮಸ್ಯೆಯನ್ನು ನಿವಾರಿಸಲು ಒಳ ಕೊಳವೆ ಚರಂಡಿಗಳಲ್ಲಿ…
Author: News Desk Benkiyabale
ತುಮಕೂರು: ನಗರದ ಹೊರವಲಯದ ಗಾರೆನರಸಯ್ಯನಕಟ್ಟೆ ಹಾಗೂ ಅಕ್ಕತಂಗಿಯರ ಕೆರೆಯಂಗಳದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ 2 ಲಗೇಜ್ ಆಟೋಗಳನ್ನು ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿರುವ ಘಟನೆ ನಡೆದಿದೆ. ನಗರದ ಅಕ್ಕತಂಗಿಯರ ಕೆರೆಯಂಗಳದಲ್ಲಿ ತರಕಾರಿ ಕಸ ಹಾಕಲು ತೆರಳಿದ್ದ ಲಗೇಜ್ ಆಟೋವನ್ನು ವಶಕ್ಕೆ ಪಡೆದು ಪಾಲಿಕೆ ಅಧಿಕಾರಿಗಳು 2 ಸಾವಿರ ರೂ. ದಂಡ ವಿಧಿಸಿದ್ದಾರೆ. ಇದೇ ರೀತಿ ಗಾರೆನರಸಯ್ಯನಕಟ್ಟೆ ಬಳಿ ಖಾಸಗಿ ಬ್ಯಾಂಕ್ವೊಂದರ ಸಿಬ್ಬಂದಿ ಲಗೇಜ್ ಆಟೋದಲ್ಲಿ ಪೇಪರ್ ಸೇರಿದಂತೆ ಇತರೆ ಕಸವನ್ನು ತುಂಬಿಕೊಂಡು ಬಂದು ಕಸ ಹಾಕಲು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ಅರಿತ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಸದರಿ ಆಟೋವನ್ನು ವಶಪಡಿಸಿಕೊಂಡು ಎರಡೂ ಆಟೋಗಳನ್ನು ಪಾಲಿಕೆ ಕಚೇರಿಗೆ ಕರೆ ತಂದು ಆಯುಕ್ತರ ಮುಂದೆ ಹಾಜರುಪಡಿಸಿದ್ದಾರೆ. ಎರಡೂ ಕಡೆ ಆಟೋಗಳಲ್ಲಿ ಕಸ ಸುರಿಯಲು ಬಂದಿದ್ದವರಿಗೆ ನಗರದಲ್ಲಿ ಸ್ವಚ್ಚತೆ ಕಾಪಾಡುವ ಕುರಿತು ಅರಿವು…
ತುಮಕೂರು : ಸಾರ್ವಜನಿಕ ವಲಯದ ರೈಲು, ಭದ್ರಾವತಿ ಉಕ್ಕು ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಕಾರ್ಮಿಕರಿಗೆ ಕನಿಷ್ಟ ಕೂಲಿ 24,000 ನಿಗದಿ ಮಾಡುವಂತೆ ಹಾಗೂ ಸ್ಕೀಂ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ತುಮಕರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಾರ್ಮಿಕ ಕಾನೂನುಗಳನ್ನು ಸಂಹಿತೆಗಳಾಗಿ ಪರಿವರ್ತಿಸುವುದು ಸಾಮಾಜಿಕ, ಸ್ವಭಾವಿಕ ನ್ಯಾಯಕ್ಕೆ ವಿರುದ್ದವಾಗಿದೆ. ದೇಶದ ಜನರ ಶ್ರಮದ ದುಡ್ಡಿನಲ್ಲಿ ಕಟ್ಟಿದ ಸಾರ್ವಜನಿಕ ವಲಯದ ರೈಲ್ವೆ, ಬಿಎಸ್ಎನ್ಎಲ್, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಎಲ್ಲಾ ಕಾರ್ಮಿಕರಿಗೆ ಕಡ್ಡಾಯ ಖಾತ್ರಿ ಪಿಂಚಣಿ ಯೋಜನೆ ರೂಪಿಸಬೇಕು. ಕನಿಷ್ಠ ಪಿಂಚಣಿ ಮಾಸಿಕ 6000 ರೂಪಾಯಿ ನಿಗದಿಗೊಳಿಸಬೇಕು. ಬೀಡಿ, ಗಣಿ, ಸಿನಿಮಾ, ಮತ್ತಿತರೆ ಕಾರ್ಮಿಕರ ಸಂರಕ್ಷಣೆಗೆ ಇದ್ದ ಕಲ್ಯಾಣ ಮಂಡಳಿಯನ್ನು…
ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಕಾಳೇನಹಳ್ಳಿ ಗ್ರಾಮದ ಜಾನಕಿರಾಮಯ್ಯ ಎಂಬುವವರ ಮನೆಯ ಮೇಕೆಯೊಂದು ಮನುಷ್ಯನ ರೂಪ ಹೋಲುವ ಮೇಕೆ ಮರಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ನಡೆದಿದೆ. ಅವರ ಮನೆಯ ಮೇಕೆಯೊಂದು ಶನಿವಾರ ಎರಡು ಮರಿಗಳಿಗೆ ಜನ್ಮನೀಡಿದ್ದು ಒಂದು ಗಂಡು ಮರಿ ಆರೋಗ್ಯವಾಗಿದೆ, ಮತೊಂದು ಮರಿ ಮೃತಪಟ್ಟಿದ್ದು ಮೃತಪಟ್ಟ ಮರಿಯ ದೇಹ ಮನುಷ್ಯನ ಆಕಾರಹೊಂದಿದೆ. ವಿಷಯ ತಿಳಿದ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಜನ ತಂಡೋಪ ತಂಡವಾಗಿ ಬಂದು ವೀಕ್ಷಿಸಿದರು.
ತುರುವೇಕೆರೆ: ಜಿಲ್ಲಾತಂಬಾಕು ನಿಯಂತ್ರಣ ಕೋಶ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಪೊಲೀಸ್ ಇಲಾಖೆ ತುರುವೇಕರೆ ಇವರುಗಳು ಜಂಟಿಯಾಗಿ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪಟ್ಟಣದಲ್ಲ್ಲಿ ಹಮ್ಮಿಕೊಂಡು ಅಂಗಡಿ ಮುಂಗಟ್ಟು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಷೇಧಿತ ಪ್ರದೇಶದಲ್ಲಿ ಧೂಮಪಾನ ಮಾಡುವುದು ಅಪರಾಧ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಲು ತಿಳಿಸಿದರಲ್ಲದೇ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದರು. ಒಟ್ಟು 50 ಪ್ರಕರಣಗಳನ್ನು ದಾಖಲಿಸುವ ಮುಖೇನ ರೂ.4560 ಗಳನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಯಿತು.ಸದರಿಕಾರ್ಯಾಚರಣೆಯಲ್ಲಿ ಜಿಲ್ಲಾ ಸಲಹೆಗಾರರಾದ ರವಿಪ್ರಕಾಶ್, ಎಂ.ಆರ್.ಪುಂಡಲೀಕ ಲಕಾಟಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಬಿ. ಚಂದ್ರಶೇಖರ್, ಎ.ಎಸ್.ಐ. ವೆಂಕಟೇಶ್ ಹಾಜರಿದ್ದರು.ಸದರಿ ಕಾರ್ಯಾಚರಣೆ ಮಾಡುವ ಮುಖೇನ ತುರುವೇಕೆರೆಯನ್ನು ತಂಬಾಕು ಮುಕ್ತ ಪ್ರದೇಶವಾಗಿ ಮಾರ್ಫಡಿಸಲು ಶ್ರಮಸುತ್ತಿರುವುದಾಗಿ ಜಿಲ್ಲಾ ಸಲಹೆಗಾರ ರವಿಪ್ರಕಾಶ್ ತಿಳಿಸಿದರಲ್ಲದೆ ಸಾರ್ವಜನಿಕರ ಸಹಕಾರ ಈ ಕಾರ್ಯಕ್ಕೆ ಅತಿ ಮುಖ್ಯವೆಂದು ತಿಳಿಸಿದರು.
ತುಮಕೂರು : ವಿವಿಧ ಸರ್ಕಾರಿ ಇಲಾಖೆಗಳು ಸಾರ್ವಜನಿಕರಿಗಾಗಿ ಒದಗಿಸುತ್ತಿರುವ 640 ನಾಗರಿಕ ಸೇವೆ ಹಾಗೂ 320 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೇವೆ ಸೇರಿದಂತೆ ಒಟ್ಟು 960 ಸಕಾಲ ಸೇವೆಗಳ ವಿಲೇವಾರಿಯಲ್ಲಿ ವಿಳಂಬ ಮಾಡುವ ಅಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ಸಕಾಲ ಮಿಷನ್ ನಿರ್ದೇಶಕರು ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿ ಕೆಸ್ವಾನ್ ಸೆಂಟರ್ನಲ್ಲಿಂದು ಸಕಾಲ ಸೇವೆಗಳ ಅಧಿನಿಯಮದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ನಲ್ಲಿ ಅವರು ಈ ಸೂಚನೆ ನೀಡಿದರು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಸಕಾಲ ಅರ್ಜಿಗಳ ವಿಲೇವಾರಿ ವರದಿಯನ್ನು ಸಕಾಲ ಪೋರ್ಟಲ್ನಲ್ಲಿ ಪ್ರತೀದಿನ ಅಪ್ಡೇಟ್ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು. ಸಕಾಲ ಅರ್ಜಿ ವಿಲೇವಾರಿ ಮಾಡುವಲ್ಲಿ…
ತುರುವೇಕೆರೆ: ಪಟ್ಟಣದ ಸಂತೆಗೆ ಬರುತ್ತಿದ್ದ ಗ್ರಾಹಕರ ಕಿಸೆಯಲ್ಲಿದ್ದ ಮೊಬೈಲನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಶುಕ್ರವಾರ ಬಂದಿಸಿದ್ದಾರೆ. ಬಂದಿತ ಆರೋಪಿ ರಾಮು ಭದ್ರಾವತಿ ನಗರದ ಬೋವಿ ಕಾಲೋನಿಯಲ್ಲಿ ಮನೆಗಳ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದವನು ಎನ್ನಲಾಗಿದೆ. ನಿನ್ನೆ ಪಟ್ಟಣದಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಆರೋಪಿ ಎಪಿಎಂಸಿ ಯಾರ್ಡ್ನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದು ಪೊಲೀಸ್ ಸಿಬ್ಬಂದಿಗಳು ಈತನ್ನು ಠಾಣೆಗೆ ಕರೆ ತಂದು ವಿಚಾರಿಸಲಾಗಿ ಪಟ್ಟಣದ ಸಂತೆಯಲ್ಲಿ ಹಲವು ತಿಂಗಳುಗಳಿಂದ ಮೊಬೈಲ್ ಕಳವು ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂದಿತನಿಂದ 35 ಸಾವಿರ ರೂಪಾಯಿಗಳ 14 ಬೆಲೆ ಬಾಳುವ ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿ ರಾಮುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಟ್ಟಣದ ಪೊಲೀಸರು ತಿಳಿಸಿದ್ದಾರೆ.
ತುಮಕೂರು: ಬಿಜೆಪಿ ಸರ್ಕಾರ ರಚನೆ ಹಾಗೂ ಡಿಸಿಸಿ ಬ್ಯಾಂಕ್ ಸೂಪರ್ಸೀಡ್ಗೆ ತಡೆಯಾಜ್ಞೆ ಹೊರಬಂದ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ಅಭಿಮಾನಿಗಳು ನಗರದ ಟೌನ್ಹಾಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಾತನಾಡಿದ ಊರುಕೆರೆ ವಿಎಸ್ಎಸ್ಎನ್ ಅಧ್ಯಕ್ಷ ಷಣ್ಮುಖ ಅವರು, ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸಾಕಷ್ಟು ಶ್ರಮಿಸಿದ್ದಾರೆ, ಬ್ಯಾಂಕ್ನಿಂದ ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿದ್ದಾರೆ, ಅಂತವರಿಗೆ ಬ್ಯಾಂಕ್ ಸೂಪರ್ಸೀಡ್ ಮಾಡುವ ಮೂಲಕ ತೊಂದರೆ ನೀಡಿದರು, ತೊಂದರೆ ನೀಡಿದವರೇ ಇಂದು ಅಧಿಕಾರವನ್ನು ಕಳೆದುಕೊಂಡಿದ್ದಾರೆ, ರಾಜಣ್ಣ ಅವರು ನುಡಿದಂತೆ ಒಂದು ವಾರದೊಳಗೆ ಡಿಸಿಸಿ ಬ್ಯಾಂಕ್ನಲ್ಲಿ ಅಧಿಕಾರವನ್ನು ಸ್ಥಾಪಿಸಿದ್ದಾರೆ ಎಂದರು. ಜಿಲ್ಲೆಯ ಜನರು ಝೀರೋ ಟ್ರಾಫಿಕ್ನಿಂದ ಬೇಸತ್ತಿದ್ದರು, ಸರ್ಕಾರ ಬಿದ್ದು ಝೀರೋ ಟ್ರಾಫಿಕ್ ಕಳೆದುಕೊಂಡಿರುವುದರಿಂದ ತುಮಕೂರು ಜಿಲ್ಲೆಗೆ ಒಳಿತಾಗಿದೆ ಎಂದು ಪರೋಕ್ಷವಾಗಿ ಡಾ.ಜಿ.ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ರಾಜಣ್ಣ ಅವರು ಅಗತ್ಯವಾಗಿದ್ದಾರೆ, ಬಿಜೆಪಿ…
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಹಸಿರು ಶಾಲು ಹೊದ್ದು, ಗೋಧೋಳಿ ಲಗ್ನದಲ್ಲಿ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಬಾಯಿ ವಾಲ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಕಾರ್ಯಕ್ರಮದಲ್ಲಿ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಪಕ್ಷದ ಅನೇಕರು ಪಾಲ್ಗೊಂಡು ಯಡಿಯೂರಪ್ಪ ಅವರಿಗೆ ಶುಭಕೋರಿದರು. ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಖಾಕಿಪಡೆ ಭದ್ರತೆ ಕೈಗೊಂಡಿದೆ. ಇನ್ನು ರಾಜಭವನ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲು ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ.
ಹುಳಿಯಾರು: ಪಟ್ಟಣದ ಬಸ್ ನಿಲ್ದಾಣದಲ್ಲಿ ಎರಡ್ಮೂರು ದಶಕಗಳಿಂದಲೂ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನಮ್ಮನ್ನು ತೆರವು ಗೊಳಿಸಿ 15 ದಿನವಾಗಿದ್ದು ಜೀವನ ನಿರ್ವಹಣೆ ಕಷ್ಟವಾಗಿದ್ದು ಅತಂತ್ರ ಸ್ಥಿತಿಯಲ್ಲಿರುವ ನಮಗೆ ಪರ್ಯಾಯ ಜಾಗ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕೆಂದು ಬಸ್ ನಿಲ್ದಾಣದ ಫುಟ್ಪಾತ್ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಕಳೆದ ವಾರದಿಂದಲೂ ತುಮಕೂರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬರುತ್ತಿದ್ದ ಫುಟ್ಪಾತ್ ವ್ಯಾಪಾರಿಗಳಿಗೆ ತಾವೇ ಖುದ್ದಾಗಿ ಹುಳಿಯಾರಿನ ಸ್ಥಳಕ್ಕೆ ಬಂದು ಪರಿಶೀಲಿಸುವ ಆಶ್ವಾಸನೆ ನೀಡಿದ್ದ ಹಿನ್ನೆಲೆಯಲ್ಲಿ ಡಾ. ಕೆ.ರಾಕೇಶ್ ಕುಮಾರ್ ಇಂದು ಹುಳಿಯಾರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ ಫುಟ್ಪಾತ್ ವ್ಯಾಪಾರಿಗಳ ಅಹವಾಲು ಆಲಿಸಿದರು. ತಮ್ಮ ಸಮಸ್ಯೆ ಬಗ್ಗೆ ಕಣ್ಣೀರಿಟ್ಟ ಫುಟ್ಪಾತ್ ವ್ಯಾಪಾರಿಗಳು ಭಾವೋದ್ವೇಗದಿಂದ ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದ ಘಟನೆ ಕೂಡ ಜರಗಿತು. ನೂರಕ್ಕೂ ಹೆಚ್ಚು ಸೇರಿದ್ದ ವ್ಯಾಪಾರಿಗಳ ಮನವಿ ಆಲಿಸಿದ ಜಿಲ್ಲಾಧಿಕಾರಿಗಳು ಪರ್ಯಾಯ ಸ್ಥಳ ಕಲ್ಪಿಸುವ ಬಗ್ಗೆ ಆಲೋಚಿಸುವುದಾಗಿ…