ತುಮಕೂರು: ಪರಿಸರದ ಅಸಮತೋಲದಿಂದ ಉಂಟಾಗುತ್ತಿರುವ ಪ್ರಾಕೃತಿಕ ವಿಕೋಪಗಳಿಗೆ ನಾವೆಲ್ಲರೂ ಕಾರಣರಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅರಣ್ಯೀಕರಣ ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕೆಂದು ಕೆ.ಎಸ್.ಆರ್.ಟಿಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ತಿಳಿಸಿದ್ದಾರೆ. ನಗರದ ಸಿರಾಗೇಟ್ನಲ್ಲಿರುವ ಕೆಎಸ್ಆರ್ಟಿಸಿ ಘಟಕ ಎರಡರಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಅಂಗವಾಗಿ ಘಟಕದ ಆವರಣದಲ್ಲಿ ನೇರಳೆ, ಹೊಂಗೆ, ಬೇವು ಹಾಗೂ ಮಾವಿನ ಗಿಡಗಳನ್ನು ನಡೆವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಘಟಕದಲ್ಲಿ ಉತ್ಪತಿಯಾಗುವ ತ್ಯಾಜ್ಯ ವಸ್ತುಗಳನ್ನು ಪ್ರತ್ಯೇಕಿಸಿ, ಅವುಗಳು ಪರಿಸರಕ್ಕೆ ಹಾನಿಮಾಡದಂತೆ ಪ್ರತ್ಯೇಕಿಸಿ, ವಿಸರ್ಜಿಸುವ ಮೂಲಕವು ಪರಿಸರ ಮಾಲಿನ್ಯವನ್ನು ನಮ್ಮ ಸಿಬ್ಬಂದಿ ಸಮರ್ಥವಾಗಿ ತಡೆಯಬಹುದಾಗಿದೆ ಎಂದು ಅಭಿಪ್ರಾಯಪಟ್ಟರು. ಘಟಕದಲ್ಲಿ ಉತ್ಪತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯ, ವೇಸ್ಟ್ ಆಯಿಲ್ ಅನ್ನು ಮನಬಂದಂತೆ ಎಸೆಯದೇ ಒಂದೆಡೆ ಹಾಕಿ, ಸ್ವಚ್ಛತೆ ಜೊತೆಗೆ ಪರಿಸರ ಮಾಲಿನ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಹೆಚ್ಚಿನ ನಿಗಾವಹಿಸಬೇಕಾಗಿದೆ, ಮೊದಲು ತಮ್ಮ ಮನಸ್ಸಿನ ಕೊಳೆಯನ್ನು ತೊಳೆದುಕೊಂಡು,…
Author: News Desk Benkiyabale
ತುಮಕೂರು: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಕುರಿತ ಆಯೋಜಿಸಿರುವ ಬೀದಿ ನಾಟಕ ಮತ್ತು ಟ್ಯಾಬ್ಲೋಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ತಾಲೂಕುಗಳ ಹೋಬಳಿ ಕೇಂದ್ರಗಳಲ್ಲಿ ಬೀದಿ ನಾಟಕ ಮತ್ತು ಟ್ಯಾಬ್ಲೋ ಪ್ರದರ್ಶನವು ಜೂನ್ 5ರಿಂದ 12ರವರೆಗೆ ನಡೆಯಲಿದ್ದು, ಜೂನ್ 5ರಂದು ತುಮಕೂರು ತಾಲೂಕಿನ ಕೋರಾ, ಬೆಳ್ಳಾವಿ, ಹೆಬ್ಬೂರು ಹೋಬಳಿ, ಕೊರಟಗೆರೆ ತಾಲೂಕಿನ ಕಸಬಾ, ಹೊಳವನಹಳ್ಳಿ; ಜೂನ್ 6ರಂದು ಮಧುಗಿರಿ ತಾಲೂಕಿನ ಕಸಬಾ, ಐ.ಡಿಹಳ್ಳಿ ಹಾಗೂ ಶಿರಾ ತಾಲೂಕಿನ ಕಸಬಾ,ಬುಕ್ಕಾಪಟ್ಟಣ; ಜೂನ್ 7ರಂದು ಪಾವಗಡ ತಾಲೂಕಿನ ಕಸಬಾ, ಮಂಗಳವಾಡ; ಜೂನ್ 8ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ, ಶೆಟ್ಟಿಕೆರೆ, ಹುಳಿಯಾರು; ಜೂನ್ 9ರಂದು ತಿಪಟೂರು ತಾಲೂಕಿನ ಕಸಬಾ, ಬಿಳಿಗೆರೆ; ಜೂನ್ 10ರಂದು ಗುಬ್ಬಿ ತಾಲೂಕಿನ ಕಸಬಾ, ನಿಟ್ಟೂರು, ಚೇಳೂರು; ಜೂನ್ 11ರಂದು ತುರುವೇಕೆರೆ ತಾಲೂಕಿನ ಕಸಬಾ,…
ತುಮಕೂರು: ದೇಶದ ಎಲ್ಲ ಕಡೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ನದಿ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಅಗತ್ಯ ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಲಿ ಎಂದು ಸಂಸದ ಜಿ.ಎಸ್.ಬಸವರಾಜು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ಹೊಸದಾಗಿ ಜಲಶಕ್ತಿ ಸಚಿವಾಲಯ ಆರಂಭಿಸಿ, ನೀರಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಯೋಜನೆಯನ್ನು ಒಂದೇ ಇಲಾಖೆಗೆ ತರುವ ಮಹತ್ವದ ನಿರ್ಧಾರ ಕೈಗೊಂಡು ದೇಶದ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಕೃಷಿಗೆ ನೀರು ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೈಗೊಂಡಿರುವ ಚಿಂತನೆ ಸ್ವಾಗತಾರ್ಹವಾಗಿದೆ ಎಂದರು. ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಅವರ ವರದಿ ಆಧಾರಿತ ರಾಜ್ಯದಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ಅಂದರೆ ಕೃಷ್ಣ, ಕಾವೇರಿ, ಪಾಲಾರ್ ಮತ್ತು ಪೆನ್ನಾರ್ ನದಿ ಸೇರಿದಂತೆ ಗಂಗಾ, ಬ್ರಹ್ಮಪುತ್ರ ಮಹಾನದಿ ಇತ್ಯಾದಿಗಳ ಜೋಡಣೆಗೆ ಕ್ರಮಕೈಗೊಳ್ಳಬೇಕಾಗಿದೆ. ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸುವ ಎತ್ತಿನ ಹೊಳೆ…
ತುಮಕೂರು: ಇದೇ ನನ್ನ ಕೊನೆಯ ಚುನಾವಣೆಯಾಗಿದ್ದರಿಂದ ಕ್ಷೇತ್ರದ ಮತದಾರರು ನನ್ನ ‘ಕೈ’ ಹಿಡಿದು ಪಾರ್ಲಿಮೆಂಟ್ಗೆ ಕಳುಹಿಸಿಕೊಟ್ಟಿದ್ದಾರೆ. ಅವರಿಗೆ ನಾನೆಂದೂ ಚಿರಋಣಿ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದುವರೆಗೂ ನಾನು 8 ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸಿದ್ದೇನೆ, ನನಗೂ ವಯಸ್ಸಾಗುತ್ತಿದೆ. ಆದ್ದರಿಂದ ಇದೇ ಕೊನೆಯ ಅವಧಿ ಎಂದು ಸ್ಪಷ್ಟಪಡಿಸಿದರು. ನೀವು ಸಚಿವ ಸ್ಥಾನದ ಆಕಾಂಕ್ಷಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಎಸ್ಬಿ ಮೋದಿ ಸರ್ಕಾರದಲ್ಲಿ 78 ವಯಸ್ಸು ದಾಟಿದ ಯಾರಿಗೂ ಸಚಿವ ಸ್ಥಾನ ನೀಡಿಲ್ಲ, ನನಗೂ 78 ವಯಸ್ಸು ಮೀರಿದೆ. ಆದ್ದರಿಂದ ನಾನು ಸಚಿವ ಸ್ಥಾನದಿಂದ ವಂಚಿತನಾಗಿದ್ದೇನೆ ಎಂದು ನುಡಿದರು. ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೊಟಗೊಂಡಿದೆ ಎಂಬ ಪ್ರಶ್ನೆಗೆ ರಾಜ್ಯದಲ್ಲಿ ಹೊಂದಾಣಿಕೆಯಿದ್ದರೂ ಜಿಲ್ಲೆಯ ಮಟ್ಟದಲ್ಲಿ ಇನ್ನೂ ಹೊಂದಾಣಿಕೆಯಾಗಿಲ್ಲ, ಜೆಡಿಎಸ್ನವರದ್ದು ಒಂದು ದಾರಿ, ಕಾಂಗ್ರೆಸ್ನವರದ್ದು ಮತ್ತೊಂದು ದಾರಿಯಂತಾಗಿದೆ. ನನ್ನ ಗೆಲುವಿಗೆ ಕಾಂಗ್ರೆಸ್ನವರು ಸಹಕರಿಸಿದ್ದಾರೆ ಎಂಬ ಹೇಳಿಕೆ ತಳ್ಳಿ ಹಾಕುವಂತಿಲ್ಲ ಎಂದು ಪರೋಕ್ಷವಾಗಿ ಮಾಜಿ ಶಾಸಕ…
ತುಮಕೂರು: ಅಕ್ರಮವಾಗಿ ಬೇಡಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವ 178 ಮಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಯ ಕಛೇರಿಯಲ್ಲಿ ನಡೆದ ಪ.ಜಾತಿ/ಪ.ಪಂಗಡ ಸಮುದಾಯಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಗೆ ಸೇರಿದ ಬೇಡಜಂಗಮ ಜಾತಿ ಪ್ರಮಾಣ ಪತ್ರವನ್ನು ಜಿಲ್ಲೆಯಲ್ಲಿ 178 ಮಂದಿ ಅಕ್ರಮವಾಗಿ ಪಡೆದು ಕೊಂಡಿದ್ದಾರೆ. ಇಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಲ್ಲದೆ ಸಂಬಂಧಪಟ್ಟ ಅಧಿಕಾರಿಯ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿಯಮ ಅನುಸಾರ ಕ್ರಮ ಕೈಗೊಳ್ಳಬೇಕು. ರದ್ದು ಮಾಡಿರುವ ಜಾತಿ ಪ್ರಮಾಣ ಪತ್ರ ಹೊಂದಿರುವರು. ಕೆಲವರು ಕೋರ್ಟ್ ಮರೆ ಹೋಗಿದ್ದಾರೆ. ಈ ಪ್ರಕರಣಗಳ ಬಗ್ಗೆಯೂ ಸೂಕ್ತ ರೀತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಮಾಜ ಕಲ್ಯಾಣ…
ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ತೋವಿನಕೆರೆ ಆಸುಪಾಸಿನ ಗ್ರಾಮಸ್ಥರನ್ನು ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿನ ಮೂಲಕ ಭಾನುವಾರ ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ. ದೊಂಬರನಹಳ್ಳಿ, ಚಿಮ್ಮನಹಳ್ಳಿ, ತೋವಿನಕೆರೆ, ಹಾಲ್ದೇವರಹಟ್ಟಿ, ಮಾರತ್ತಮ್ಮನಹಳ್ಳಿ, ಡಿ.ಶೆಟ್ಟಿಹಳ್ಳಿ, ಹೊಸಹಳ್ಳಿ, ಕುರುಬರಹಳ್ಳಿ, ಅಕ್ಕಳಸಂದ್ರ ಬಸವಾಪುರ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಗ್ರಾಮಗಳಲ್ಲಿನ ಸಾಕು ಪ್ರಾಣಿಗಳನ್ನು ಚಿರತೆಯು ಹಿಡಿದು ತಿನ್ನುವ ಮೂಲಕ ಕಳೆದ ಐದಾರು ತಿಂಗಳಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತು. ಗೊಲ್ಲರಹಟ್ಟಿಗಳ ಕೊಟ್ಟಿಗೆಗಳಲ್ಲಿ ಕೂಡಿದ್ದ ಕುರಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದ್ದವು. ಇನ್ನು ರೈತರು ಮುಂಜಾನೆ ಮತ್ತು ಸಂಜೆ ತಮ್ಮ ತೋಟಕ್ಕೆ ನೀರು ಬಿಡಲು ಹೋಗುವುದಕ್ಕೂ ಹೆದರುತ್ತಿದ್ದರು. ಇದರಿಂದ ಆತಂಕಗೊಂಡ ಜನರು ಅರಣ್ಯಾಧಿಕಾರಿಗೆ ದೂರು ನೀಡಿದ್ದರು. ಅರಣ್ಯಾಧಿಕಾರಿಗಳು ಮೂರು ದಿನಗಳ ಹಿಂದೆ ತೋವಿನಕೆರೆ ಬಳಿಯ ಬಸವಾಪುರ ಕಾವಲ್ನ ತೋಟವೊಂದರಲ್ಲಿ ಬೋನ್ ಇಟ್ಟು ಅದರಲ್ಲಿ ನಾಯಿ ಕಟ್ಟಿ ಹಾಕಿದ್ದರು. ಆಹಾರ ಅರಸಿ ಬಂದ ಗಂಡು ಚಿರತೆ…
ತುಮಕೂರು: ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು ಗುರುವಾರ ಸಂಭ್ರಮಾಚರಿಸಿದರು. ನಗರದ ಟೌನ್ಹಾಲ್ ವೃತ್ತದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಿ, ಸಾರ್ವಜನಿಕರು ಮೋದಿ ಪ್ರಮಾಣ ವಚನ ಸ್ವೀಕರಿಸುವ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಬಿಜೆಪಿ ಅವಕಾಶ ಮಾಡಿಕೊಟ್ಟಿತ್ತು. ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಇಲ್ಲಿ ಕಾರ್ಯಕ್ರಮ ವೀಕ್ಷಿಸಿದರು. ಇದೇ ವೇಳೆ ಕಾರ್ಯಕರ್ತರು ಟೌನ್ಹಾಲ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬದಂತೆ ಸಂಭ್ರಮಿಸಿದರು. ಗುಬ್ಬಿ ತಾಲೂಕಿನ ಎಂ.ಎನ್. ಕೋಟೆಯ ಹೊಸಕೆರೆಯಲ್ಲಿ ಹಾಗೂ ತುಮಕೂರು ನಗರದ ಹಲವೆಡೆ ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು. ಟೀ ಹಂಚಿದ ಅಭಿಮಾನಿ: ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ ಲಕ್ಷ್ಮಿವೆಂಕಟೇಶ್ವರ ಟೀ ಸ್ಟಾಲ್ ಮಾಲೀಕ ರಾಜಣ್ಣ ಅವರು ನರೇಂದ್ರ…
ತುಮಕೂರು: ತಂಬಾಕು ಸೇವನೆ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಕಠಿಣ ಕಾನೂನು ಜಾರಿಯಾದಾಗ ಮಾತ್ರ ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಶಾಸಕ ಜ್ಯೋತಿ ಗಣೇಶ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಮಹಾನಗರ ಪಾಲಿಕೆ, ಸಾರಿಗೆ, ಕೆ.ಎಸ್.ಆರ್.ಟಿ.ಸಿ., ಐ.ಎಂ.ಎ., ಉಚಿತ ಕಾನೂನು ಸೇವಾ ಪ್ರಾಧಿಕಾರ, ತುಮಕೂರು ಹಾಲು ಒಕ್ಕೂಟ, ಫುಡ್ ಪಾರ್ಕ್, ವಿವಿಧ ನರ್ಸಿಂಗ್ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿಂದು “ವಿಶ್ವ ತಂಬಾಕು ರಹಿತ ದಿನಾಚರಣೆ ಹಾಗೂ ತಂಬಾಕು ಮುಕ್ತ ತುಮಕೂರು ನಗರ ಘೋಷಣಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚಾಗಿ ತಂಬಾಕು ಸೇವನೆಯನ್ನು ಚಟವಾಗಿ ರೂಢಿಸಿಕೊಂಡಿದ್ದು, ತಂಬಾಕು ಉತ್ಪನ್ನಗಳಾದ ಧೂಮಪಾನ, ಗುಟ್ಕಾ ಸೇವನೆಯಿಂದ ತಮ್ಮ ಅತ್ಯಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಶೇಕಡ 100ರಷ್ಟು ತಂಬಾಕು ನಿರ್ಮೂಲನೆ ಮಾಡಲು ಸಾದ್ಯವಾಗುತ್ತಿಲ್ಲ ಎಂದು…
ತುಮಕೂರು: ತುಮಕೂರು ನಗರ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಕೈಗೊಳ್ಳುವುದರಿಂದ ಜೂನ್ 1 ರಿಂದ 25ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಟಿಎಫ್10 ಹಾಗೂ 2 ಫೀಡರ್ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾಮಗಾರಿ ಕೈಗೊಂಡಿರುವುದರಿಂದ ಜೂನ್ 1, 2, 14 ಹಾಗೂ 24ರಂದು ಕುವೆಂಪು ನಗರ; ಜೂ.3, 12 ಹಾಗೂ 19ರಂದು ಬಿ.ಎ.ಗುಡಿಪಾಳ್ಯ; ಜೂ. 4 ಹಾಗೂ 17ರಂದು ಬಟವಾಡಿ; ಜೂನ್ 6, 8, 18 ಹಾಗೂ 20ರಂದು ಹನುಮಂತಪುರ; ಜೂ. 9ರಂದು ವಾಲ್ಮೀಕಿ ನಗರ: ಜೂ. 10 ಹಾಗೂ 25ರಂದು ಶಾರದಾದೇವಿ ನಗರ; ಜೂ. 11, 15 ಹಾಗೂ 21ರಂದು ವಿದ್ಯಾನಗರ; ಜೂ. 13ರಂದು ಬಿ.ಹೆಚ್.ರಸ್ತೆ; ಜೂ.16 ಹಾಗೂ 23ರಂದು ಕೆಎಸ್ಎಫ್ಸಿ ಕೈಗಾರಿಕಾ ಪ್ರದೇಶ; ಜೂ.22ರಂದು ಆದರ್ಶನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್…
ತುಮಕೂರು : ತುಮಕೂರಿನ ಸ್ಮಾರ್ಟ್ಸಿಟಿ ಯೋಜನೆಯಡಿ ಶ್ರೀ ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿಥ್ ಮಲ್ಟಿಲೆವೆಲ್ ಕಾರ್ಪಾರ್ಕಿಂಗ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಒಂದು ವರ್ಷದೊಳಗೆ ನಿರ್ಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಸೂಚಿಸಿದರು. ಮಲ್ಟಿಯುಟಿಲಿಟಿ ಮಾಲ್ ನಿರ್ಮಾಣ ಸಂಬಂಧ ಇಂದು ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಶ್ರೀ ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳ ಪ್ರಸ್ತುತ ಎಪಿಎಂಸಿ ಸುಪರ್ಧಿಗೆ ಸೇರಿದೆ. ಆದರೂ ಈ ಸ್ಥಳ ತಕರಾರಿನಲ್ಲಿದ್ದು, ಅಗತ್ಯಬಿದ್ದರೆ ಸ್ಥಳವನ್ನು ಸಚಿವ ಸಂಪುಟದಲ್ಲಿ ಮುಂದಿಟ್ಟು ವಶಕ್ಕೆ ಪಡೆದು ಕೊಳ್ಳಲಾಗುವುದು ಎಂದರು. ಈ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ಮಾಲ್ ಮೂರು ಅಂತಸ್ತಿನ ಕಟ್ಟಡವಾಗಿದೆ. ತಳಮಹಡಿಯಲ್ಲಿ 140 ಕಾರ್ ಗಳ ಪಾರ್ಕಿಂಗ್ ನಿರ್ಮಿಸಲಾಗುತ್ತಿದೆ. ಈ ಮಾಲ್ನನ್ನು ಒಂದು ವರ್ಷದ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ತುಮಕೂರು…