ತುಮಕೂರು: ಮದ್ಯಪಾನ, ಅತಿವೇಗ ಅಜಾಗರೂಕ ಚಾಲನೆ, ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ 86 ಸವಾರರುಗಳ ಡಿ.ಎಲ್(ಚಾಲನಾ ಪರವಾನಗಿ)ಗಳನ್ನು ಅಮಾನತ್ತುಗೊಳಿಸಿದ್ದು, ಸಂಚಾರಿ ನಿಯಮ ಉಲ್ಲಂಘಿಸಿರುವವರ ವಿರುದ್ಧದ ಕಾರ್ಯಚಾರಣೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ ಕುಮಾರ್ ಅವರು ಸಾರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮದ್ಯಪಾನ-120, ಅಪಘಾತ-10, ಅತಿವೇಗ/ಅಜಾಗರೂಕ ಚಾಲನೆ-35 ಹಾಗೂ ಸಂಚಾರ ನಿಯಮ ಉಲ್ಲಂಘನೆ-16 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 86 ಡಿ.ಎಲ್ಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು. ಎಲ್ಲಾ ಕಾಲೇಜುಗಳಲ್ಲಿ ಸಾರಿಗೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಲೋಕಸಭಾ ಚುನಾವಣೆ ಮುಗಿದ ನಂತರ ಅರಿವು ಕಾರ್ಯಕ್ರಮಗಳ ಆಯೋಜನೆ ರೂಪುರೇಷಗಳನ್ನು ಸಿದ್ದಪಡಿಸಿ, ಅದರಂತೆ ರಸ್ತೆ ಸುರಕ್ಷತೆ ಸಂಚಾರ ನಿಯಮಗಳ…
Author: News Desk Benkiyabale
ತುಮಕೂರು: ಚುನಾವಣೆಯಲ್ಲಿ ಮತ ಚಲಾಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು 18 ವರ್ಷ ತುಂಬಿದ ಪತ್ರಿಯೊಬ್ಬ ಯುವಕ/ಯುವತಿಯರು ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಪ್ಪದೇ ಮತಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಅವರು ತಿಳಿಸಿದರು. ಮತದಾನ, ಮತಕ್ಷೇತ್ರ, ಮತಪಟ್ಟಿ ಮತ್ತಿತರ ಮಾಹಿತಿಯನ್ನು ಪಡೆಯಲು ಚುನಾವಣಾ ಆಯೋಗವು “ಚುನಾವಣೆ” ಎಂಬ ನೂತನ ಮೊಬೈಲ್ ಆ್ಯಪ್ ಸೃಜಿಸಲಾಗಿದೆ. ಗೂಗಲ್ ಪ್ಲೇಸ್ಟೋರ್ ಮೂಲಕ ಈ ಆ್ಯಪ್ನ್ನು ಡೌನ್ಲೋಡ್ ಮಾಡಿಕೊಂಡು ಚುನಾವಣಾ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ಉಚಿತ ಸಹಾಯವಾಣಿ 1950 ಕರೆ ಮಾಡುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದರ ಜೊತೆಗೆ ಸಾರ್ವಜನಿಕ ದೂರುಗಳನ್ನು ದಾಖಲಿಸಲು…
ಚಿಕ್ಕನಾಯಕನಹಳ್ಳಿ: ಗ್ರಾಮೀಣ ಭಾಗದಿಂದಲೂ ಮರೆಯಾಗುತ್ತಿರುವ ಶ್ರಮಸಂಸ್ಕೃತಿಯನ್ನು, ಈಗಿನ ಸಮಾಜಕ್ಕೆ ಪರಿಚಯುಸುವಲ್ಲಿ ತಾಲ್ಲೂಕಿನ ಶೆಟ್ಟಿಕೆರೆಯ ಜನತಾಯುವ ಕ್ರೀಡಾಸಂಘ ಪ್ರಯತ್ನ ಶ್ಲಾಘನೀಯ ಕಾರ್ಯ ಎಂದು ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸಮೂರ್ತಿ ತಿಳಿಸಿದರು. ತಾಲ್ಲೂಕಿನ ಶೆಟ್ಟಿಕೆರೆಯ ಜನತಾ ಪ್ರೌಢಶಾಲಾ ಆವರಣದಲ್ಲಿ ಅಂತರ್ರಾಷ್ಟ್ರೀಯ ಮಹಿಳಾದಿನದ ಅಂಗವಾಗಿ ನಡೆದ ರಾಗಿಬೀಸುವ ಸ್ಪರ್ಧೆ ಹಾಗೂ ಮೂರು ಬಿಂದಿಗೆ ನೀರು ಹೊರವ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೆ ಜಾನಪದಗಳ ಹುಟ್ಟಿಗೆ ಕಾರಣವಾಗಿದ್ದ ಧಾನ್ಯಗಳನ್ನು ಬೀಸುವ ಹಾಗೂ ಕುಟ್ಟುವ ಸಂಸ್ಕೃತಿ ಇಂದು ಮರೆಯಾಗಿದೆ. ಅಂದು ರೈತರು ಕೊಟ್ಟಿಗೆ ಗೊಬ್ಬರವನ್ನು ತಮ್ಮ ಹೊಲಕ್ಕೆ ಬಳಸಿ ಯಾವುದೇ ರಾಸಾಯನಿಕ ಆಂಶದಿಂದ ಹೊರತಾದ ಧಾನ್ಯವನ್ನು ಬೆಳೆಯುತ್ತಿದ್ದರು. ನಂತರ ಕಣದಲ್ಲಿ ಸಂಸ್ಕರಿಸಿದ ಧಾನ್ಯವನ್ನು ಮನೆಗೆ ತಂದು ಕೆಡದಂತೆ ತಮ್ಮದೆ ವ್ಯವಸ್ಥೆಯಲ್ಲಿ ಇಡುತ್ತಿದ್ದರು. ಇಂತಹ ಧಾನ್ಯವನ್ನು ಪುಡಿಮಾಡಿ ಬಳಸುವಲ್ಲಿ ಬೀಸುವ ಕಲ್ಲುಗಳು , ಒರಳಕಲ್ಲು ಮತ್ತು ಒನಕೆಗಳ ಬಳಕೆ ಎಲ್ಲಾ ಮನೆಯಲ್ಲಿಯೂ ಇರುತ್ತಿತ್ತು. ಇದರ ಬಳಕೆಯಿಂದ ಧಾನ್ಯದಲ್ಲಿನ ಸತ್ವ ಹಾಗೂ ಸಾರದ…
ಚಾಮರಾಜನಗರ : ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ನನಗೆ ಮಾಡಿದ ಉಪಕಾರಕ್ಕೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ನೋಡುತ್ತೀನಿ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಟಿಯಲಲ್ಲಿ ಮಾತನಾಡಿದ ಅವರು ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಕರ್ನಾಟಕಕ್ಕೆ ಕುಮಾರಸ್ವಾಮಿ ಸಿಎಂ ಆದ್ರೆ, ನನಗೆ ಮಾತ್ರ ಸಿದ್ದರಾಮಯ್ಯ ಅವರೇ ಲೀಡರ್ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಎಲ್ಲರೂ ಕೂಟ ಒಗ್ಗಟ್ಟಾಗಿದ್ದೇವೆ, ಯಾರೇ ನಿಂತರೂ ಕೂಡ ಈ ಬಾರಿ ನಮ್ಮ ಅಭ್ಯರ್ಥಿಯೇ ಗೆಲುವು ದಾಖಲಿಸಿದ್ದಾರೆ. ನಮ್ಮ ಅಭ್ಯರ್ಥಿ ಧ್ರುವ ನಾರಾಯಣ್ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ತುಮಕೂರು: ಹುಳಿಯಾರು ಹೋಬಳಿ ಪೋಚಕಟ್ಟೆ ಗ್ರಾಮದ ಪೋಚಕಟ್ಟೆ ಗೇಟ್ನಿಂದ ಉತ್ತರಕ್ಕೆ ಪೋಚಕಟ್ಟೆ ಗ್ರಾಮ, ಹುಳಿಯಾರು ಅಮಾನಿಕೆರೆ ಮತ್ತು ಕಸಬಾ ಗ್ರಾಮಗಳ ಆಯ್ದ ಸರ್ವೆ ನಂಬರ್ನ ಜಮೀನುಗಳಲ್ಲಿ ಹಾದು ಹೋಗುವ ನಿಯೋಜಿತ 150ಎ ಬೈಪಾಸ್ ರಸ್ತೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತ ಮುಖಂಡರಾದ ಸತೀಶ್ ಕೆಂಕೆರೆ ನೇತೃತ್ವದಲ್ಲಿ ಈ ಭಾಗದ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹುಳಿಯಾರಿನ ನಿವಾಸಿಗಳ ಪೈಕಿ ನಾಲ್ಕು ಮಂದಿ ಮಾತ್ರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಈ ಸಂಬಂಧ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ಕುಮಾರ್ ಅವರಿಗೆ ಮನವಿ ಅರ್ಪಿಸಿದರು. ಬೈಪಾಸ್ ಆರಂಭಗೊಂಡಿರುವ ಪೋಚಕಟ್ಟೆ ಗ್ರಾಮ ಹುಳಿಯಾರು ಕಸಬಾ ಗಡಿಯಲ್ಲಿದ್ದು, ಈ ಎರಡು ಗ್ರಾಮಗಳ ಮಧ್ಯೆ ಪೂರ್ವಕ್ಕೆ ಹರಿಯುವ ವೇದಾವತಿ ಹಾಗೂ ಸುವರ್ಣಮುಖಿ ನದಿಗಳ ಉಪನದಿಯಿದ್ದು, ಪೋಚಕಟ್ಟೆ ಹಾಗೂ ಹುಳಿಯಾರು ಗ್ರಾಮದ ತೊರೆದಂಡೆಯಲ್ಲಿರುವ ಜಮೀನುಗಳು ತೆಂಗು, ಅಡಿಕೆ, ಬಾಳೆ ಮುಂತಾದ ಆರ್ಥಿಕ ಬೆಳೆಗಳ ಮೂಲ…
ತುಮಕೂರು: ದೇಶ ಸಧೃಢವಾಗಿ, ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ನರೇಂದ್ರಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು, ಇದಕ್ಕೆ ಇಂದಿನಿಂದಲೇ ಮೋದಿಯವರ ಸಾಧನೆ ಕುರಿತು ಪ್ರಚಾರ ಮಾಡುವುದಾಗಿ ಸಂಕಲ್ಪ ಮಾಡಬೇಕೆಂದು ಹಾಸನದ ಶಾಸಕರಾದ ಪ್ರೀತಂಗೌಡರವರು ಕರೆ ನೀಡಿದರು. ತುಮಕೂರು ಜಿಲ್ಲಾ ಬಿಜೆಪಿವತಿಯಿಂದ ಸಿದ್ಧಗಂಗಾ ಫಾರ್ಮಸಿ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಪ್ರಬುದ್ಧರ ಗೋಷ್ಟಿಯನ್ನು ಉದ್ಘಾಟಿಸಿ ಮಾತನಾಡುತ್ತಾ 60 ವರ್ಷಗಳ ಕಾಲ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಿದ್ದ ಕಾಂಗ್ರೆಸ್ ಸರ್ಕಾರ ತೊಲಗಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರಿಗೆ ಜನ ಅಧಿಕಾರ ನೀಡಿದರು ಪ್ರಧಾನಿಯಾದ ದಿನದಿಂದಲೂ ಎಂದೂ ರಜೆಯನ್ನು ಪಡೆಯದೆ 18 ಗಂಟೆಗೂ ಹೆಚ್ಚಿನ ಕಾಲ ದೇಶದ ಏಳ್ಗೆಗಾಗಿ ದುಡಿಯುತ್ತಿದ್ದು, ವಿಶ್ವನಾಯಕರಾಗಿ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯದಿದ್ದಾರೆ. ದೇಶದ ಅಭಿವೃದ್ಧಿಗಾಗಿ ತನ್ನನ್ನು ತಾನು ಅರ್ಪಿಸಿರುವ ಮೋದಿಜೀ ಕಟ್ಟಕಡೆಯ ವ್ಯಕ್ತಿಗೂ ಸಹ ಯೋಜನೆಗಳು ತಲುಪಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಬಿಜೆಪಿ ಪಕ್ಷವು ತನ್ನದೇ ಆದ ಉತ್ತಮ ಸಿದ್ಧಾಂತವನ್ನು ಹೊಂದಿರುವ ಜೊತೆಗೆ ಅತ್ಯುತ್ತಮ,…
ಕೊರಟಗೆರೆ: ಈ ಸರಕಾರಿ ಶಾಲೆಯಲ್ಲಿ ಓದಿದ ಎಷ್ಟೋ ವಿಧ್ಯಾರ್ಥಿಗಳು ಇವತ್ತು ರಾಜ್ಯ ಸೇರಿದಂತೆ ಹೊರರಾಜ್ಯದಲ್ಲಿ ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತೀದ್ದಾರೆ. ಅದರೆ ಇವಾಗ ಮುಖ್ಯ ಶಿಕ್ಷಕರ ನಿರ್ಲಕ್ಷದಿಂದ ಶಾಲೆಯ ಅವರಣದಲ್ಲಿ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡಾಗಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೊಳವನಹಳ್ಳಿ ಹೋಬಳಿ ಕೇಂದ್ರ ಸ್ಥಾನದಲ್ಲಿ ಇರುವ ಹೊಳವನಹಳ್ಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಓದಿದ ಎಷ್ಟೂ ವಿಧ್ಯಾರ್ಥಿಗಳು ಇಂದು ಐಎಎಸ್ ಹಾಗೂ ಐಪಿಎಸ್ಯಂತ ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತೀದ್ದಾರೆ. ಇಂತಹ ಶಾಲೆಯನ್ನ ಉಳಿಸಿ ಬೆಳಸಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದ್ದು, ಶಾಲೆಯ ಅವಧಿ ಮುಗಿದ ನಂತರ ಶಾಲೆಯ ಮುಖ್ಯ ಶಿಕ್ಷಕರು ಗೇಟ್ ಬೀಗ ಹಾಕಿಕೊಂಡು ಹೋಗುವುದಿಲ್ಲ ಅದ್ದರಿಂದ ಸಂಜೆಯಾದ ತಕ್ಷಣ ಶಾಲೆಯ ಅವರಣದಲ್ಲಿ ಅನೈತಿಕ ಚಟುವಟಿಕೆಗಳು ಪ್ರಾರಂಭವಾಗುತ್ತವೆ. ವಿಪರೀತ ಗಲೀಜು ಮಾಡಿ ಶಾಲೆಯ ವಾತವರಣ ಹಾಳು ಮಾಡವುದರಿಂದ ಯಾವ ಪೋಷಕರು ತಮ್ಮ ಮಕ್ಕಳನ್ನ ಸರಕಾರಿ ಶಾಲೆ…
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಸಿದ್ದತೆ ನಡೆಸಿದ್ದು ಅಂತಿಮವಾಗಿ ಜ್ಯಾತ್ಯಾತಿತ ಜನತಾದಳ ತಮ್ಮ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಿದೆ. ಸಿ.ಬಿ.ಸುರೇಶ್ ಬಾಬು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿ ಕಣಕ್ಕಿಳಿಸುವುದಾಗಿ ಜಾತ್ಯಾತೀತ ಜನತಾದಳದ ವರಿಷ್ಠರು ತೀರ್ಮಾನಿಸಿದ್ದು ಬಹಳ ದಿನಗಳಿಂದ ಗೊಂದಲದಲ್ಲಿದ್ದ ಎರಡೂ ಪಕ್ಷಗಳ ಮತದಾರರು ನಿರಾಳರಾಗಿದ್ದಾರೆ. ಹಾಲಿ ಕಾಂಗ್ರೆಸ್ ಪಕ್ಷದ ಸಂಸದ ಎಸ್.ಪಿ.ಮುದ್ದಹನುಮೇಗೌಡರು ಮತ್ತೆ ಅಭ್ಯರ್ಥಿಯಾಗಬಹುದೆಂಬ ನಿರೀಕ್ಷೆ ಜನರಲ್ಲಿತ್ತು. ಆದರೆ ಜೆಡಿಎಸ್ ತನ್ನ ಪಕ್ಷದ ಹಿತದೃಷ್ಟಿಯಿಂದ ಸ್ಥಾನ ಬಿಟ್ಟುಕೊಡದೇ ಪಟ್ಟು ಹಿಡಿದು ತನ್ನದಾಗಿಸಿಕೊಂಡಿದೆ. ಬಹಳ ವರ್ಷಗಳ ನಂತರ ಅಂದರೆ ಕುರುಬ ಸಮುದಾಯದ ಸಿಎನ್ ಬಾಸ್ಕರಪ್ಪನವರ ನಂತರ ಸುರೇಶ್ ಬಾಬು ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದು ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿ ಮಾಡುವ ಸಾದ್ಯತೆಯಿದೆ. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮೂರು ಭಾರಿ ಶಾಸಕರಾಗಿದ್ದ ಇವರು ಕಳೆದ…
ತುಮಕೂರು : ಜಾತಿ, ಧರ್ಮ, ಸ್ವಾರ್ಥ ಮುಕ್ತವಾಗಿ ಸಾಹಿತಿ, ಪತ್ರಕರ್ತ ಸಮಾಜಮುಖಿ, ಜೀವನ್ಮುಖಿಯಾಗಿ ಸಮಾಜ ಕಟ್ಟುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದರೆ ಸಮ ಸಮಾಜ ನಿರ್ಮಾಣವಾಗಲಿದೆ ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದರು. ನಗರದ ಕೆಇಬಿ ಇಂಜಿನಿಯರ್ಸ್ ಸಂಘದ ಸಭಾಂಗಣದಲ್ಲಿ ಬೆಂಕಿಯ ಬಲೆ ದಿನ ಪತ್ರಿಕೆ ಏರ್ಪಡಿಸಿದ್ದ 15ನೇ ವಾರ್ಷಿಕೋತ್ಸವ, ಪ್ರತಿಭಾಪುರಸ್ಕಾರ, ಬಡ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಸಮಾರಂಭವನ್ನು ಉದ್ಘಾಟಿಸಿ, ಸಮಾಜದಲ್ಲಿ ಅಸಮಾನತೆ, ವಿಘಟನೆಗಳು ಹೆಚ್ಚುವುದರಿಂದ ಶೋಷಿತರು, ಆರ್ಥಿಕ ಮತ್ತು ಸಮಾಜಿಕವಾಗಿ ಬಲಾಢ್ಯರಾಗಲು ಸಾಧ್ಯವಾಗುವುದಿಲ್ಲ. ಸಂಸ್ಕøತಿ, ಸಂಸ್ಕಾರಗಳನ್ನು ಬೆಳೆಸುವಲ್ಲಿ ಶಿಕ್ಷಣ ಪ್ರಜ್ಞೆ ಮಹತ್ವ ಕಾರ್ಯ ನಡೆಸಲಿದೆ. ಹೀಗಾಗಿ ಸಾಹಿತಿ, ಪತ್ರಕರ್ತರು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು. ಆ ಕಾರ್ಯವನ್ನು ಬೆರಳಿಣಿಕೆಯಷ್ಟು ಜನ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಬಡವರು, ಶೋಷಿತರು, ಮಹಿಳೆಯರ ಪರವಾದ ನಿಲುವುಗಳು ಕಂಠಸ್ಥಾಯಿಯಾಗದೆ ಹೃದಯದಿಂದ ವ್ಯಕ್ತವಾಗಬೇಕು. ಲೋಕಸಭಾ ಚುನಾವಣೆ ಸನ್ನಿಹಿತವಾಗಿದು,್ದ ಪ್ರಜ್ಞಾವಂತ ಮತದಾರರು ಜಿಲ್ಲೆಗೆ ತಮ್ಮ ಅಧಿಕಾರಾವಧಿಯಲ್ಲಿ ನೀಡಿರುವ…
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಡಿ.ಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮೀದೇವರ ದೇವಾಲಯ ನಮ್ಮ ಪೂರ್ವಜರ ಸ್ವತ್ತಾಗಿದ್ದು ಆದರೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಮ್ಮ ಸಹೋದರರೊಡಗೂಡಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದು ಮಾಹಿತಿ ಹಕ್ಕು ಅಧಿನಿಯಮದಡಿ ದೇವಾಲಯದ ಖಾತೆ ನಕಲು ಕೇಳಿದರೆ ದಾಖಲೆ ನೀಡುತ್ತಿಲ್ಲವೆಂದು ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕ ಹೆಚ್.ಎಲ್.ಕೃಷ್ಣಮೂರ್ತಿ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮೀದೇವರ ದೇವಾಲಯ ನಮ್ಮ ಪೂರ್ವಜರ ಸ್ವತ್ತು ಈ ದೇವಾಲಯದ ನಿರ್ಮಾಣವನ್ನು ನಮ್ಮ ತಂದೆಯವರು ತಮ್ಮ ಸ್ವಂತ ಜಾಗದಲ್ಲಿ ಸ್ವಂತ ಕರ್ಚಿನಲ್ಲಿ ನಿರ್ಮಿಸಿದ್ದರು. ನಾವು ಮೂವರು ಸಹೋದರರು ಆದರೆ ನನ್ನನ್ನು ಹೊರತುಪಡಿಸಿ ದೇವಾಲಯದ ಜಾಗವನ್ನು ನನ್ನ ಸಹೋದರರು ಖಾತೆ ಮಾಡಿಸಿಕೊಂಡಿರುವ ಸಂಶಯ ನನ್ನಲಿದೆ. ದೇವಾಲಯದ ಪೂಜಾಕೈಂಕರ್ಯಗಳಿಂದ ನನ್ನನ್ನು ಹೊರಗಿಟ್ಟಿರುವುದು ಒಂದೆಡೆಯಾದರೆ ದೇವಾಲಯದ ಖಾತೆ ನಕಲನ್ನು ಮಾಹಿತಿ ಹಕ್ಕಿನ ಅಧಿನಿಯಮದಡಿ ಸ್ಥಳೀಯ ಪಂಚಾಯಿತಿ ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಹಕ್ಕು ನಿಯಮದ…