ತುರುವೇಕೆರೆ: ಬಡ್ಡಿ ರಹಿತ ಸಾಲ ಪಡೆದುಕೊಳ್ಳುವ ಬೀದಿ ಬದಿ ವ್ಯಾಪಾರಿಗಳು ಸದುಪಯೋಗ ಮಾಡಿಕೊಂಡು ಆರ್ಥಿಕ ಸಬಲತೆ ಹೊಂದಬೇಕೆಂದು ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಆರ್. ರಾಜೇಂದ್ರ ಕಿವಿಮಾತು ಹೇಳಿದರು. ಪಟ್ಟಣದ ಪಟ್ಟಣ ಪಂಚಾಯತ್ ಆವರಣದಲ್ಲಿ ಡಿ.ಸಿ.ಸಿ. ಬ್ಯಾಂಕ್ ಬೀದಿಬದಿ ವ್ಯಾಪಾರಿಗಳಿಗೆ ಬಡವರಬಂಧು ಯೋಜನೆಯ ಸಾಲ ವಿತರಣೆ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ಐದಾರು ವರ್ಷಗಳ ಹಿಂದೆಯೇ ಬೀದಿ ಬದಿ ವ್ಯಾಪಾರಿಗಳಿಗೆ ಜಿಲ್ಲಾ ಕೇಂದ್ರ ಬ್ಯಾಂಕ್ ವತಿಯಿಂದ ಬಡ್ಡಿ ರಹಿತ ಸಾಲ ನೀಡಬೇಕೆಂಬುದು ಅಧ್ಯಕ್ಷರಾಗಿದ್ದ ಕೆ.ಎನ್.ರಾಜಣ್ಣನವರು ಆಕಾಂಕ್ಷೆಯನು ಹೊಂದಿದ್ದರು. ಈ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ವಿತರಿಸುವ ಮೂಲಕ ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಶಕ್ತತೆಗೊಳಿಸಲು ಡಿ.ಸಿ.ಸಿ.ಬ್ಯಾಂಕ್ ಮುಂದಾಗಿದ್ದನ್ನು ಸ್ಮರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕೆ ಉತ್ತಮವಾದ ಯೋಜನೆಯಾಗಿದೆ ಎಂದರು. ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಬಿ.ಎಸ್. ದೇವರಾಜು ಮಾತನಾಡಿ ಸರ್ಕಾರದ…
Author: News Desk Benkiyabale
ಯಾದಗಿರಿ: ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ನಡೆದ ಅಪಘಾತದಲ್ಲಿ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಶಹಾಬಾದ್ ನಿವಾಸಿಗಳಾದ ಸುಧಾಕರ್(47), ಪೃಥ್ವಿ(7) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಗಳೂರಿನಿಂದ ಶಹಾಬಾದ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸೈದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಿಎಸ್ಎನ್ಎಲ್ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ಉಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ 6 ತಿಂಗಳ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬಿಎಸ್ಎನ್ಎಲ್ ನೌಕರರು ಸಿಐಟಿಯು ನೇತೃತ್ವದಲ್ಲಿ ತುಮಕೂರು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಕೇಂದ್ರ ಸರ್ಕಾರ ಸಾವಿರಾರು ಬಿಎಸ್ಎನ್ಎಲ್ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಪಿತೂರಿ ನಡೆಸಿದ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲು ಪಿತೂರಿ ನಡೆಸುತ್ತಿದೆ. ಇದಕ್ಕೆ ಪ್ರಜ್ಞಾವಂತರು ಮತ್ತು ದೇಶಭಕ್ತರು ಬೆಂಬಲ ನೀಡಬಾರದು ಎಂದು ಮನವಿ ಮಾಡಿದರು. ಸಿಐಟಿಯು ಮೊದಲಿನಿಂದಲೂ ಸಾರ್ವಜನಿಕ ಉದ್ದಿಮೆಗಳ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಸಾರ್ವಜನಿಕ ಉದ್ದಿಮೆಗಳನ್ನು ಉಳಿಸುವುದರಿಂದ ಲಕ್ಷಾಂತರ ಕುಟುಂಬಗಳು ಜೀವನ ಸಾಗಲಿಸಲು ಅನುಕೂಲವಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಬಿಎಸ್ಎನ್ಎಲ್ ಸಂಸ್ಥೆಗೆ ಸಂಪನ್ಮೂಲ, ಸೆಕ್ಟ್ರಂ ಮತ್ತು ಹಣಕಾಸು ನೆರವು ನೀಡುವ ಮೂಲಕ ಸಂಸ್ಥೆಯು ಜನಸ್ನೇಹಿಯಾಗಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. …
ತುಮಕೂರು: ದೇಶದ ಗಡಿ ಕಾಯುವ ಯೋಧರಂತೆ ನಗರದ ಆರೋಗ್ಯವನ್ನು ಕಾಪಾಡುವ ಸಫಾಯಿ ಕರ್ಮಚಾರಿಗಳಿಗೂ ಸಮಾನ ಮನ್ನಣೆ ಇದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಅವರು ತಿಳಿಸಿದರು. ನಗರದ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ ಇಂದು ಸಫಾಯಿ ಕರ್ಮಚಾರಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಲೆತಲಾಂತರಗಳಿಂದ ತಲೆಯ ಮೇಲೆ ಮಲವನ್ನು ಹೊತ್ತು ಊರು- ಕೇರಿಗಳ ಸ್ವಚ್ಛತೆಗಾಗಿ ಶ್ರಮಿಸಿದ್ದವರ ಜೀವನ ಮಟ್ಟವನ್ನು ಉತ್ತಮಗೊಳಿಸಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಚುನಾಯಿತ ಪ್ರತಿನಿಧಿಗಳು, ಆಡಳಿತ ಯಂತ್ರಗಳು ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರಿಗೆ ಇರುವ ಸರ್ಕಾರಿ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು. ಅವರನ್ನು ಮುಖ್ಯ ವಾಹಿನಿಗೆ ತಂದು ಸಮಾಜದಲ್ಲಿ ಸಾಮಾನ್ಯರಂತೆ ಯಾವುದೇ ಬೇಧ ತೋರದೆ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.…
ಪಾವಗಡ :- ತಾಲ್ಲೂಕಿನಲ್ಲೇ ಆತ್ಯಂತ ಹಿಂದುಳಿದ ಭಾಗವಾದ ನಾಗಲಮಡಿಕೆ ಹೋಬಳಿ ಅಭಿವೃದ್ದಿಗೆ ಆದ್ಯತೆ ನೀಡಿ 25 ಕೋಟಿ ವೆಚ್ಚದಲ್ಲಿ ಏಕಲವ್ಯ ವಸತಿ ಶಾಲೆ ನಿರ್ಮಾಣಕ್ಕೆ ಪ್ರಪೋಸಲ್ ಕಳುಹಿಸಲಾಗಿದೆ ಎಂದು ಕಾರ್ಮಿಕ ಸಚಿವಾ ವೆಂಕಟರಮಣಪ್ಪ ತಿಳಿಸಿದರು. ತಾಲ್ಲೂಕಿನ ರ್ಯಾಪ್ಟೆ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕಂದಾಯ ಮತ್ತು ಪಿಂಚಣೆ ಆದಾಲತ್ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ವೆಂಕಟರಮಣಪ್ಪ ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತೀಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಂದೇ ಭಾರಿ ಮಾಶಾಸನ ನೀಡಲು ನಿರ್ದರಿಸಿದ ಕಾರಣದಿಂದ ಇಂದು 525 ಫಲಾನುಭವಿಗಳಿಗೆ ಆದೇಶದ ಪ್ರತಿ ನೀಡಲಾಗುತ್ತಿದ್ದು ಯಾವುದೇ ತಾಂತ್ರಿಕ ಸಮಸ್ಯೆ ಇದ್ದರೂ ಕೂಡಲೇ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಚಿತ್ರದುರ್ಗ ಸಂಸದರಾದ ಚಂದ್ರಪ್ಪ ಮಾತನಾಡಿ, ಈ ಹಿಂದೆ ಐದುವರ್ಷ ಪೂರ್ಣವದಿ ಸರ್ಕಾರ ನಡೆಸಿದ್ದು ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಹಿಡೇರಿಸಿ ಜನಪರ ಸರ್ಕಾರವಾಗಿ ರೈತರ ಸಾಲಮನ್ನ ಮಾಡಿದ್ದವೆ ಇಂದಿನ ಸಂಮಿಶ್ರ ಸರ್ಕಾರ 45…
ತುಮಕೂರು: ಸಮಾಜದಲ್ಲಿ ಕಸುಬಿನ ಮೂಲಕ ಜಾತಿಗಳು ಮಾರ್ಪಟ್ಟಿದ್ದರೂ, ತನ್ನ ಕಾಯಕದ ಮೂಲಕ ಸಮಾಜವನ್ನು ಬದಲಾಯಿಸುವ ಧ್ಯೇಯ ಹೊಂದಿದ್ದ ಏಕೈಕ ದಾರ್ಶನಿಕ ನಿಜಶರಣ ಅಂಬಿಗ ಚೌಡಯ್ಯ ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಗಂಗಾ ಮತಸ್ಥರ ಸಂಘಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬರಿಗೂ ಅವರ ವೃತ್ತಿಯೇ ಮುಖ್ಯ. ಸಮಾಜದಲ್ಲಿರುವ ಏರು-ಪೇರುಗಳನ್ನು ತನ್ನ ವಚನದ ಮೂಲಕ ಕಟುವಾಗಿ ಟೀಕಿಸಿದ ಮಹಾನ್ ದಾರ್ಶನಿಕ ಅಂಬಿಗ ಚೌಡಯ್ಯ. ಗಂಗಾಮತಸ್ಥರ ಸಮುದಾಯಕ್ಕೆಂದು ಸರ್ಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಬಳಸಿಕೊಳ್ಳುವುದರ ಮೂಲಕ ಈ ಸಮಾಜದ ಯುವಜನತೆ ಶೈಕ್ಷಣಿಕವಾಗಿ ಮುಂದುವರೆಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಾಹಿತಿ ಮತ್ತು ವಿಮರ್ಶಕ ಡಾ|| ರವಿಕುಮಾರ್ ನೀಹ ಉಪನ್ಯಾಸ…
ತುಮಕೂರು: ಸಂಚಾರಿ ಪೊಲೀಸ್ ಠಾಣೆಯೂ ಸೇರಿದಂತೆ ಜಿಲ್ಲೆಯಲ್ಲಿರುವ 41 ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಹೊಸ ವಾಹನ ವಿತರಣೆ ಮಾಡಿರುವ ಠಾಣೆ ಹೊರತುಪಡಿಸಿ ಉಳಿಕೆ ಠಾಣಾಧಿಕಾರಿಗಳಿಗೆ 15-20 ವರ್ಷಗಳಷ್ಟು ಹಳೆಯ ವಾಹನಗಳನ್ನು ಪರಿಶೀಲಿಸಿ ಹೊಸ ವಾಹನ ಮಂಜೂರು ಮಾಡಿ ಪೊಲೀಸರ ಕರ್ತವ್ಯ ನಿಷ್ಠೆಯನ್ನು ಮತ್ತಷ್ಟು ಹೆಚ್ಚಿಸುವತ್ತ ಕ್ರಮ ಕೈಗೊಳ್ಳಬೇಕೆಂದು ಹ್ಯೂಮನ್ ರೈಟ್ಸ್ ಪ್ರೊಟೆಸ್ಟ್ ಸೆಂಟ್ರಲ್ (ರಿ.) ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹ್ಯೂಮನ್ ರೈಟ್ಸ್ ಪ್ರೊಟೆಸ್ಟ್ ಸೆಂಟ್ರಲ್ನ ರಾಜ್ಯಾಧ್ಯಕ್ಷ ಎಸ್.ಸಾಧಿಕ್ ಪಾಷ ನೇತೃತ್ವದಲ್ಲಿ ನಿಯೋಗದಲ್ಲಿ ತೆರಳಿದ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ಕಚೇರಿಯ ಡಿವೈಎಸ್ಪಿ ಸೂರ್ಯನಾರಾಯಣ್ ರಾವ್ ರವರ ಮೂಲಕ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹ್ಯೂಮನ್ ರೈಟ್ಸ್ ಪ್ರೊಟೆಸ್ಟ್ ಸೆಂಟ್ರಲ್ನ ರಾಜ್ಯಾಧ್ಯಕ್ಷ ಎಸ್.ಸಾಧಿಕ್ ಪಾಷ ರಾಜ್ಯದಲ್ಲಿ ಪೊಲೀಸ್ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಗುಣಮಟ್ಟದ ವಾಹನಗಳ ಕೊರತೆ, ಸಿಬ್ಬಂದಿ ಕೊರತೆ, ನಿಗಧಿತ…
ಮಿಡಿಗೇಶಿ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶ್ರಮಸಂಸ್ಕøತಿ ಹಿನ್ನೆಲೆ ಹೊಂದಿದ್ದು, ಅವರಲ್ಲಿ ಕ್ರೀಡಾಸ್ಪೂರ್ತಿ ಹೆಚ್ಚಾಗಿದೆ. ಇಂತಹ ಪ್ರತಿಭೆಗಳಿಗೆ ಸೂಕ್ತ ತರಬೇತಿ ನೀಡಿದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮುತ್ತಾರೆ. ಆಟಗಾರರು ಕ್ರೀಡಾಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಎದುರಾಗುವ ಪ್ರತಿಯೊಂದು ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಂಡಾಗ, ಬಹುದೊಡ್ಡ ಗೆಲುವು ನಿಮ್ಮದಾಗಲಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಆರ್.ಸುದೀಪ್ಕುಮಾರ್ ಕರೆ ನೀಡಿದರು. ಅವರು ಮಿಡಿಗೇಶಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರಕಾಲೇಜುಗಳ ಮಹಿಳೆಯರ ಥ್ರೋಬಾಲ್ ಮತ್ತು ಟೆನ್ನಿಕಾಯ್ಟ್ ಪಂದ್ಯಾವಳಿಗಳ ವಿಜೇತರಿಗೆ ಬಹುಮಾನ ಮತ್ತು ಟ್ರೋಫಿ ವಿತರಿಸಿ ಮಾತನಾಡಿ ಇಡೀ ಜೀವನ ಒಂದು ಕ್ರೀಡೆಯಿದ್ದಂತೆ ಆಟಗಾರರು ಗೆಲುವಿಗಾಗಿ ಸತತ ಶ್ರಮಪಡುತ್ತಿದ್ದರೆ, ಪ್ರತಿಸ್ಪರ್ಧಿಗಳು ಅವರನ್ನು ಸೋಲಿಸಲು ಪ್ರಯತ್ನಿಸುತ್ತಿರುತ್ತಾರೆ. ಹಾಗೆಯೇ ನಿಜಜೀವನದಲ್ಲಿಯೂ ಸಹ ಸಾಧನೆಗೆ ಬರುವ ಅಡ್ಡಿಆತಂಕಗಳನ್ನು ನಿವಾರಿಸಿ ಯಶಸ್ಸಿನ ಮೆಟ್ಟಿಲನ್ನು ಏರಬೇಕಾಗಿದೆ. ಕ್ರೀಡೆಗೆ ಹೆಚ್ಚಿನ ಮಹತ್ವ ಸಿಗುತ್ತಿರುವ ಈ ಕಾಲಘಟ್ಟದಲ್ಲಿ…
ತುಮಕೂರು: ತುಮಕೂರು ನಗರವನ್ನು ಪರಿಸರ ಸ್ನೇಹಿ, ಉತ್ತಮ, ಸುಂದರ ನಗರ ಮಾಡಲು ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಹಾನಗರ ಪಾಲಿಕೆಗಳು ಜಂಟಿಯಾಗಿ ಕೈಗೊಂಡಿರುವ ಗೋಡೆಗಳ ಮೇಲೆ ವರ್ಣರಂಜಿತ 3ಡಿ ಚಿತ್ರಗಳನ್ನು ಬಿಡಿಸುತ್ತಿರುವ ಈ ಕಾರ್ಯ ನಗರಕ್ಕೆ ಹೊಸ ಮೆರಗು ತರಲಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು. ನಗರವನ್ನು ಸುಂದರವಾಗಿಸುವ ಉದ್ದೇಶದಿಂದ ನಗರದ ಪ್ರವೇಶ ದ್ವಾರ ಬಟವಾಡಿ ಪ್ರದೇಶದಲ್ಲಿ ಏರ್ಪಡಿಸಿದ್ದ ಗೋಡೆಗಳ ಮೇಲೆ ವರ್ಣರಂಜಿತ ಚಿತ್ರಗಳನ್ನು ಬಿಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸ್ಮಾರ್ಟ್ಸಿಟಿ ಲಿಮಿಟೆಡ್ ಹಲವಾರು ಯೋಜನೆಗಳನ್ನು ಈಗಾಗಲೇ ಹಮ್ಮಿಕೊಂಡಿದ್ದು, ನಗರದ ಗೋಡೆಯ ಮೇಲೆ ಚಿತ್ರವನ್ನು ಬಿಡಿಸುವ ಕಾರ್ಯಕ್ರಮದ ಮೂಲಕ ನಗರ ಇನ್ನಷ್ಟು ಸುಂದರ ಕಾಣಲಿದೆ. ಇಂತಹ ಕಾರ್ಯಕ್ರಮಗಳಿಂದ ದೃಶ್ಯ ಕಲೆಗಳಿಗೆ ಮಹತ್ವ ಕೊಟ್ಟಂತಾಗುತ್ತದೆ. ತೋಟಗಾರಿಕೆ ಇಲಾಖೆಯು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದ್ದು, ಖ್ಯಾತ ವರ್ಣರಂಜಿತ ಕಲಾಕಾರರ ಸಂಸ್ಥೆಯಾದ “Uಉಐಙ IಓಆIಂಓS” ಚಿತ್ರಕಾರರು ನಗರದ ಬಟವಾಡಿ ಫ್ಲೈಓವರ್…
ತುಮಕೂರು : ಕೊರಟಗೆರೆ ಪಟ್ಟಣದ ಊರ್ಡಿಗೆರೆ ಕ್ರಾಸ್ ಬಳಿ 47.49ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ.ಪರಮೇಶ್ವರ್ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಕೊರಟಗೆರೆ ಪಟ್ಟಣ ಪರಿಮಿತಿಯಲ್ಲಿ 15ಕೋಟಿ ರೂ.ಗಳ ವೆಚ್ಚದ ಹುಣಸನಹಳ್ಳಿ-ಚಿಕ್ಕಹಳ್ಳಿ(ಎಸ್.ಹೆಚ್-3) 2.40 ಕಿ.ಮೀ. ರಸ್ತೆಗೆ ವೈಟ್-ಟಾಪಿಂಗ್, ತಾಲೂಕಿನ ವ್ಯಾಪ್ತಿಯಲ್ಲಿ 18.36ಕೋಟಿ ರೂ.ಗಳ ವೆಚ್ಚದಲ್ಲಿ ಬಾಗೇಪಲ್ಲಿ-ಹಲಗೂರು (ರಾಜ್ಯ ಹೆದ್ದಾರಿ-94ರ ಸರಪಳಿ 80.57 ಕಿ.ಮೀ ರಿಂದ 103.87 ಕಿ.ಮೀ.ವರೆಗೆ) ರಸ್ತೆ ಅಭಿವೃದ್ಧಿ ಕಾಮಗಾರಿ 10.51ಕೋಟಿ ರೂ.ಗಳ ವೆಚ್ಚದಲ್ಲಿ ಕೊರಟಗೆರೆ ತಾಲೂಕಿನ ತುಂಬಾಡಿ-ಜೋನಿಗರಹಳ್ಳಿ ಸೇರುವ(ಸರಪಳಿ 13.10 ಕಿ.ಮೀ.ವರೆಗೆ) ರಸ್ತೆ ಹಾಗೂ 18.62ಕೋಟಿ ರೂ.ಗಳ ವೆಚ್ಚದಲ್ಲಿ ಮಧುಗಿರಿ ತಾಲೂಕು ವ್ಯಾಪ್ತಿ ಕೊರಟಗೆರೆ–ಆಂಧ್ರಪ್ರದೇಶ ಗಡಿಯ ಕೊಡಗದಾಲ-ಐ.ಡಿ ಹಳ್ಳಿ ಮಾರ್ಗವಾಗಿ (ರಾಜ್ಯ ಹೆದ್ದಾರಿ-160 ಸರಪಳಿ 13 ಕಿ.ಮೀ. ರಿಂದ 41 ಕಿ.ಮೀ. ವರೆಗೆ) ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದರು. …