Author: News Desk Benkiyabale

ತುಮಕೂರು:       ಕುಷ್ಠರೋಗವು ದೇವರ ಶಾಪ ಅಥವಾ ಪಾಪದ ಫಲಗಳಿಂದ ಬರುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಗಣೇಶ ತಿಳಿಸಿದರು.       ಸ್ಪರ್ಶ ಕುಷ್ಠರೋಗ ಅರಿವು ಆಂದೋಲನದ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಾಂಧೀಜಿಯವರು ಹುತಾತ್ಮರಾದ ದಿನವಾದ ಇಂದು ಅವರ ಸ್ಮರಣೆಯಲ್ಲಿ ರಾಷ್ಟ್ರಾದ್ಯಂತ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನವನ್ನು ಹಮ್ಮಿಕೊಳ್ಳಾಗುತ್ತಿದೆ. ಗಾಂಧೀಜಿಯವರ “ಕುಷ್ಠ ಮುಕ್ತ ದೇಶ”ದ ಕನಸನ್ನು ನಾವೆಲ್ಲಾ ನನಸಾಗಿಸೋಣ ಎಂದು ಹೇಳಿದರಲ್ಲದೆ ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಕುಷ್ಠರೋಗಿಗಳನ್ನು ಕಂಡರೆ ತಾರತಮ್ಯ ತೋರದೆ ದೌರ್ಜನ್ಯಕ್ಕೊಳಗಾದ ಕುಷ್ಠರೋಗಿಗಳನ್ನು ಮುಖ್ಯವಾಹಿನಿಗೆ ತಂದು ಸಾಮಾನ್ಯರೊಂದಿಗೆ ಬದುಕಲು ಅವಕಾಶ ಕಲ್ಪಿಸಬೇಕೆಂದು ಅವರು ಮನವಿ ಮಾಡಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ ಮಾತನಾಡಿ ಜಿಲ್ಲಾದ್ಯಂತ ಜನವರಿ 30 ರಿಂದ ಫೆಬ್ರುವರಿ 13ರವರೆಗೆ 15 ದಿನಗಳ ಕಾಲ…

Read More

ತುರುವೇಕೆರೆ:       ಕನ್ನಡ ಬೆಳಸಬೇಕು ಉಳಿಸಬೇಕು ಎನ್ನುವ ಸಂಘಟನೆಗಳಿಗಿಂತ ಬಳಸಿ ಉಳಿಸುವ ಮನಸ್ಸಿನ ಸಂಘಟನೆಗಳ ಅವಶ್ಯಕತೆ ಪ್ರಸ್ಥುತ ದಿನಮಾನಗಳಲ್ಲಿ ಅತಿ ಅವಶ್ಯಕವಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪವಾಡ ಬಯಲು ತಜ್ನ ಹುಲಿಕಲ್ ನಟರಾಜ್ ಅಭಿಪ್ರಾಯಪಟ್ಟರು.       ಪಟ್ಟಣದ ಹಿರಣ್ಣಯ ಬಯಲು ರಂಗಮಂದಿರದ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆ ವಹಸಿ ಮಾತನಾಡಿ ಕನ್ನಡವನ್ನು ಬೆಳೆಸಬೇಡಿ ಬಳಸಿ, ಹಸಿರೇ ಹುಸಿರು ಪೃಕೃತಿಯನ್ನು ಕಾಪಾಡುವ ಹೊಣೆ ನಮ್ಮದು. ಸಾಹಿತ್ಯಾಸಕ್ತರಲ್ಲಿ ಮನಸ್ಸು ಬದಲಾಗುತ್ತಿದೆ ಸಾಹಿತ್ಯ ಸಮ್ಮೇಳನಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿರುವುದು ಒಂದೆಡೆಯಾದರೆ ಸಮ್ಮೇಳನಗಳು ಜಾರ್ತೆಯಾಗಿ ಮಾರ್ಪಾಡಾಗುತ್ತಿರುವುದು ಮೊತ್ತೊಂದೆಡೆಯಾಗಿದೆ, ಸಮ್ಮೇಳನಗಳು ಕನ್ನಡಿಗರ ಮನಸ್ಸನ್ನು ಬೆಸೆಯುವ ನಾಡಹಬ್ಬವಾಗಬೇಕು ಎಂದರು.       ಕೆಲ ಸಮೂಹ ಮಾಧ್ಯಮಗಳು ಜನಪರವಾಗದೆ ಕೇವಲ ಟಿ.ಆರ್.ಪಿ. ಪರವಾಗಿದ್ದು, ಸಮಾಜದಲ್ಲಿ ಒಡಕು ಮೂಡಿಸುವಂತಹ ಹಾಗೂ ಕೌಟುಂಬಿಕ ಸಮಸ್ಯೆಗಳನ್ನು ಬೀದಿಗೆ ತಂದು ಮನೆಯ ಮನಸ್ಸುಗಳ ಮಾನಸಿಕ ಖಿನ್ನತೆಗೆ ಪ್ರೇರಣೆ ನೀಡುತ್ತಿರುವುದರಿಂದ ಮಾನಸಿಕ…

Read More

 ತುಮಕೂರು:       ಮಹಾ ನಗರಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ 4 ವಿವಿಧ ಸ್ಥಾಯಿ ಸಮಿತಿಗಳಿಗೆ ಬುಧವಾರ ಪಾಲಿಕೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಮೇಯರ್ ಆಗಿ 21ನೇ ವಾರ್ಡ್‍ನ ಲಲಿತಾ ರವೀಶ್ ಹಾಗೂ ಉಪ ಮೇಯರ್ ಆಗಿ 19ನೇ ವಾರ್ಡ್‍ನ ರೂಪಶ್ರೀ ಅವರು ಆಯ್ಕೆಯಾದರು. ಬೆಂಗಳೂರು ಪ್ರಾದೇಶಿಕ ಆಯುಕ್ತರು ಹಾಗೂ ಪಾಲಿಕೆ ಚುನಾವಣಾಧಿಕಾರಿ ಶಿವಯೋಗಿ ಸಿ.ಕಳಸದ ಅವರು ಬೆಳಿಗ್ಗೆ 11.30 ರಿಂದ ನಡೆಸಿದ ಚುನಾವಣೆ ಪ್ರಕ್ರಿಯೆಯಲ್ಲಿ ಹಾಜರಿದ್ದ 34 ವಾರ್ಡ್‍ಗಳ ಪಾಲಿಕೆ ಸದಸ್ಯರ ಹಾಜರಾತಿ ಪಡೆದು, ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸಿ ಪರಿಶೀಲಿಸಲಾಯಿತು. ನಂತರ ಅಭ್ಯರ್ಥಿಗಳಿಗೆ ನಾಮಪತ್ರಗಳನ್ನು ಹಿಂಪಡೆಯಲು ಕಾಲಾವಕಾಶ ನೀಡಲಾಗಿತ್ತು. ಅಭ್ಯರ್ಥಿಗಳ ನಾಮನಿರ್ದೇಶನ ಪತ್ರ ಕ್ರಮಬದ್ಧಗೊಂಡ ನಂತರ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಇದಕ್ಕೂ ಮುನ್ನ ಕಳೆದ ಆಗಸ್ಟ್ 31ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕರಿಸಲಾಯಿತು.       ಪಾಲಿಕೆಯ ಮೇಯರ್, ಉಪಮೇಯರ್…

Read More

ತುಮಕೂರು :       ಜಿಲ್ಲೆಯ ಹೇಮಾವತಿ ಶಾಖಾ ನಾಲೆಯ ಆಧುನೀಕರಣಗೊಳಿಸಿದರೆ ಮಾತ್ರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಸಂಸದ ಎಸ್.ಪಿ. ಮುದ್ದಹನುಮೇಗೌಡ ತಿಳಿಸಿದರು.       ನಗರದ ಪ್ರವಾಸಿ ಮಂದಿರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಮಾವತಿ ಯೋಜನೆಯಡಿ ಜಿಲ್ಲೆಗೆ 24.8 ಟಿಎಂಸಿ ನೀರಿನ ಹಂಚಿಕೆಯಾಗಿದ್ದರೂ, ಈವರೆಗೂ ಪೂರ್ಣ ಪ್ರಮಾಣದ ನೀರನ್ನು ಹರಿಸಿಕೊಳ್ಳಲು ಸಾಧ್ಯವಾಗಿಲ್ಲ. ನಾಲೆಯಲ್ಲಿ ಹೂಳು ಹೆಚ್ಚಾಗಿ ತುಂಬಿಕೊಂಡಿದೆಯಲ್ಲದೆ ಮರಗಿಡಗಳು ಬೆಳೆದು ನೀರು ಸರಾಗವಾಗಿ ಹರಿಯಲು ಅಡಚಣೆಯಾಗುತ್ತಿದೆ. ನಾಲೆಯ ಹೂಳನ್ನು ತೆಗೆದು ಆಧುನೀಕರಣಗೊಳಿಸುವುದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸಬಹುದೆಂದರು. ಎಕ್ಸ್‍ಪ್ರೆಸ್ ನಾಲೆ ಪ್ರಸ್ತಾವನೆ ಕೈಬಿಡಲು ಮನವಿ:-       ನಾಲೆಯಿಂದ ಜಿಲ್ಲೆಯ ಕುಣಿಗಲ್ ದೊಡ್ಡಕೆರೆಗೆ ನೀರು ಹರಿಸಿಕೊಳ್ಳಲು ನಾಲೆಯ 7ನೇ ಕಿ.ಮೀ.ನಿಂದ 165 ಕಿ.ಮೀ.ವರೆಗಿನ ಎಕ್ಸ್‍ಪ್ರೆಸ್ ನಾಲೆಯನ್ನು ನಿರ್ಮಿಸುವ ಪ್ರಸ್ತಾವನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಈ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕೆಂದು ಮನವಿ ಮಾಡಿದರು.      ಎಕ್ಸ್‍ಪ್ರೆಸ್ ನಾಲೆ…

Read More

ತುಮಕೂರು:       ಜನವರಿ 31ರಂದು ನಡೆಯಲಿರುವ ಲಿಂಗೈಕೆ ಡಾ|| ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 11 ದಿನಗಳ ಪುಣ್ಯ ಸ್ಮರಣಾ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ರಕ್ಷಣಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ವಲಯ ಐ.ಜಿ.ಪಿ ದಯಾನಂದ್ ತಿಳಿಸಿದರು.       ಶ್ರೀಗಳ ಪುಣ್ಯ ಸ್ಮರಣಾ ಕಾರ್ಯಕ್ರಮದ ಅಂಗವಾಗಿ ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಅವರು ಗೋಸಲ ಸಿದ್ಧೇಶ್ವರ ವೇದಿಕೆ ಮುಂಭಾಗ ಸಜ್ಜುಗೊಳ್ಳುತ್ತಿರುಯವ ವೇದಿಕೆ ಮತ್ತು ಇನ್ನಿತರೆ ಭಕ್ತರು ಆಗಮಿಸುವ ಸ್ಥಳವನ್ನು ಪರಿಶೀಲಿಸಿದರು.       ಪುಣ್ಯ ಸ್ಮರಣಾ ಕಾರ್ಯಕ್ರಮಕ್ಕೆ ಈಗಾಗಲೇ ಮಠದಿಂದ ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು ಭಕ್ತಾಧಿಗಳು ಶ್ರೀಗಳ ಗದ್ದುಗೆಯ ದರ್ಶನ ಪಡೆಯುವುದರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಅನುವಾಗುವಂತೆ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.       ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ಗದ್ದುಗೆ ದರ್ಶನ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಭಕ್ತಾಧಿಗಳ ಹೆಚ್ಚಳದ ಆಧಾರದ ಮೇರೆಗೆ ಮಾರ್ಗ ಬದಲಾವಣೆ ಮಾಡಲಾಗುವುದು. ಬರುವ…

Read More

 ತುಮಕೂರು:       ಸತತ ಬರದಿಂದ ಬೆಸತ್ತಿರುವ ಜಿಲ್ಲೆಯ ಜನರಿಗೆ ಅದರಲ್ಲಿಯೂ ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೆ ಒಂದು ಹಸು ನೀಡುವ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ಹಾಗೂ ಸರಕಾರದೊಂದಿಗೆ ಮಾತುಕತೆ ನಡೆಸಲಿದ್ದೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದ್ದಾರೆ.       ತಾಲೂಕಿನ ಬೆಳ್ಳಾವಿ ಹೋಬಳಿ ನಾಗಾರ್ಜುನಹಳ್ಳಿಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆವತಿಯಿಂದ ಹಮ್ಮಿಕೊಂಡಿದ್ದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ದ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರಿಗೆ ನಿರಂತರ ಬರದಿಂದ ಬದುಕು ಕಷ್ಟವಾಗಿದೆ. ಬೇರೆ ಬೇರೆ ಯೋಜನೆಗಳಿಗೆ ಸಾವಿರಾರು ಕೋಟಿ ರೂಗಳನ್ನು ಸರಕಾರ ಖರ್ಚು ಮಾಡುತ್ತಿದೆ. ಈ ಹಣದಲ್ಲಿ ಪ್ರತಿ ಕುಟುಂಬಕ್ಕೆ ಒಂದು ಹಸು ವಿತರಿಸುವ ಮೂಲಕ ಅವರು ಸಹ ಬರವನ್ನು ಸಮರ್ಥವಾಗಿ ಎದುರಿಸುವ ಶಕ್ತಿಯನ್ನು ನೀಡಲಿ ಎಂಬ ಉದ್ದೇಶದಿಂದ ಬಜೆಟ್ ಮಂಡನೆಗು ಮುನ್ನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.      …

Read More

 ತುಮಕೂರು :       ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಫೆಬ್ರುವರಿ 1 ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 1.50ರೂ.ಗಳಷ್ಟು ಹೆಚ್ಚಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ಸಿ.ವಿ. ಮಹಾಲಿಂಗಯ್ಯ ತಿಳಿಸಿದರು.       ಸರ್ಕಾರಿ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‍ಗೆ 22 ರೂ.ಗಳನ್ನು ನೀಡುತ್ತಿದ್ದು, ಫೆಬ್ರುವರಿ 1ರಿಂದ 23.50 ರೂ.ಗಳಿಗೆ ಹೆಚ್ಚಿಸಲಾಗುವುದು. ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿರುವುದನ್ನು ಮನಗಂಡು ಹಾಲಿನ ದರವನ್ನು ಹೆಚ್ಚಿಸಲಾಗಿದೆ. ಇದರಿಂದ ಒಕ್ಕೂಟಕ್ಕೆ ದಿನವೊಂದಕ್ಕೆ 10.30ಲಕ್ಷ ರೂ.ಗಳಷ್ಟು ಹೆಚ್ಚುವರಿ ಖರ್ಚು ಬರಲಿದೆ. ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯಲ್ಲಿ ಮಾತ್ರ ಈ ದರವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.        ಇದಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಹಾಲು ಉತ್ಪಾದಕ ಸದಸ್ಯರುಗಳ 70ಸಾವಿರ ರಾಸುಗಳಿಗೆ 5ಕೋಟಿ ರೂ. ವೆಚ್ಚದಲ್ಲಿ ವಿಮಾ ಸೌಲಭ್ಯ ಒದಗಿಸಲಾಗಿದೆ. ಒಕ್ಕೂಟದ ವ್ಯಾಪ್ತಿಯಲ್ಲಿರುವ ಹಾಲು…

Read More

 ತುಮಕೂರು:       ಕುಷ್ಠರೋಗ ನಿಯಂತ್ರಣದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಇಂದಿನಿಂದ ಜನವರಿ 13ರವರೆಗೆ ಕುಷ್ಠ ರೋಗ ಅರಿವು ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಡಾ: ಪ್ರೇಮ್‍ಕುಮಾರ್ ತಿಳಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಕುಷ್ಠರೋಗ ಅರಿವು ಆಂದೋಲನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ 72 ಕುಷ್ಠ ರೋಗ ಪ್ರಕರಣಗಳು ನೋಂದಣಿಯಾಗಿದ್ದು, ಡಿಸೆಂಬರ್ ಅಂತ್ಯಕ್ಕೆ 67 ಪ್ರಕರಣಗಳಿಗೆ ಔಷಧೋಪಚಾರ ಮಾಡಲಾಗಿದೆ ಎಂದು ತಿಳಿಸಿದರು.       ಆಂದೋಲನ ಕಾರ್ಯಕ್ರಮಕ್ಕೆ ನಿಯೋಜಿಸಿರುವ ಅಧಿಕಾರಿಗಳು ಕಾರ್ಯಕ್ರಮಕ್ಕೆ ಕೈಜೋಡಿಸಿ ಸಹಕರಿಸಬೇಕೆಂದು ಸೂಚಿಸಿದರಲ್ಲದೆ ಕುಷ್ಠರೋಗ ನಿವಾರಣೆ ಕುರಿತಂತೆ ಗ್ರಾಮಸಭೆ, ಶಾಲಾ ಮಕ್ಕಳೊಂದಿಗೆ ಕ್ವಿಜ್ ಕಾರ್ಯಕ್ರಮ, ಅಂಗನವಾಡಿ ಕೇಂದ್ರ, ಸ್ವಸಹಾಯ ಸಂಘಗಳೊಂದಿಗೆ ಅರಿವು ಕಾರ್ಯಕ್ರಮಗಳನ್ನು ನಡೆಸಲು ತಾಕೀತು ಮಾಡಿದರು.        ಸಭೆಯಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|| ಸನತ್‍ಕುಮಾರ್, ಜಿಲ್ಲಾ ಆಶಾ ಮೇಲ್ವಿಚಾರಕಿ ಆರ್. ಯಶೋಧ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ…

Read More

ತುಮಕೂರು :       ರಾಜ್ಯದಲ್ಲಿ ಸಣ್ಣ ಕೈಗಾರಿಕೆಯಿಂದಲೇ ಶೇ.60ರಷ್ಟು ಉದ್ಯೋಗ ಸೃಷ್ಟಿ ಹಾಗೂ ಶೇ. 40ರಷ್ಟು ಜಿ.ಎಸ್.ಟಿ. ಸಂಗ್ರಹವಾಗುತ್ತಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.       ಬೆಂಗಳೂರಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ವತಿಯಿಂದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿಂದು ಏರ್ಪಡಿಸಿದ್ದ 6 ದಿನಗಳ ಉದ್ಯಮ ಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.       ಯುವಕರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಕೈಗಾರಿಕಾ ಇಲಾಖೆಯಿಂದ ದೊರೆಯುವ ಸಾಲ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಸಹಾಯಧನಕ್ಕಾಗಿಯೇ ಸಾಲವನ್ನು ಪಡೆಯಬಾರದು. ಇಲಾಖೆಯು ಸ್ವಯಂ ಉದ್ಯೋಗ ಕೈಗೊಳ್ಳಲು ನೀಡುವ ಸಾಲ ಸೌಲಭ್ಯದಿಂದ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.       ಸಾಲ ಸೌಲಭ್ಯವನ್ನು ಒಂದೇ ಕುಟುಂಬದವರು ಪಡೆಯದೆ ಇತರೆ ಬಡ ಕುಟುಂಬದ ನಿರುದ್ಯೋಗಿಗಳಿಗೆ ಅವಕಾಶ ಮಾಡಿಕೊಡಬೇಕು. ದುಡಿಯುವ ಕೈಗಳಿಗೆ ಮಾತ್ರ ಸಾಲ…

Read More

ತುಮಕೂರು:       ನಗರದ ಸಿದ್ದಗಂಗಾ ಮಠದಲ್ಲಿ ಜ.31 ರಂದು ನಡೆಯಲಿರುವ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ,ಶ್ರೀ ಶಿವಕುಮಾರಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ಒಂದು ಲಾರಿ ಹಾಗು ಒಂದು ಟೆಂಪೋ ಎರಡು ಲೋಡ್ ಅಕ್ಕಿ ಸಮರ್ಪಿಸಿದರು.       ಜಿಲ್ಲೆಯ ಮೂಲೆ ಮೂಲೆಗಳಿಂದ ಭಕ್ತರು ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಧವಸ ಧಾನ್ಯ ಅರ್ಪಿಸುತ್ತಿದ್ದಾರೆ ,ಶ್ರೀ ಮಠದ ಪರಮಭಕ್ತರಾಗಿರುವ ಮಾಜಿ ಸಚಿವ ಸಿ ಚನ್ನಿಗಪ್ಪ ಅವರ ಕುಂಟುಂಬ ಮೊದಲಿನಿಂದಲೂ ಶ್ರೀ ಮಠದ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಮಂಗಳವಾರ ಕುಟುಂಬದ ಪರವಾಗಿ ಶಾಸಕ ಡಿ ಸಿ ಗೌರೀಶಂಕರ್ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಸಮ್ಮುಖದಲ್ಲಿ ಶ್ರೀ ಮಠಕ್ಕೆ ಅಕ್ಕಿ ಸಮರ್ಪಿಸಿದರು.       ಶ್ರೀ ಮಠಕ್ಕೆ ಆಗಮಿಸಿದ ಶಾಸಕ ಡಿ ಸಿ ಗೌರೀಶಂಕರ್ ಸಿದ್ದಗಂಗಾಶ್ರೀಗಳ ಆಶೀರ್ವಾದ ಪಡೆದು ಪುಣ್ಯಸ್ಮರಣೆ ಕಾರ್ಯಕ್ರಮದ ಸಿದ್ದತೆಗಳ ಕುರಿತಾಗಿ ಶ್ರೀಗಳ ಜೊತೆ ಸಮಾಲೋಚಿಸಿದರು.  ಬಳಿಕ…

Read More