ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ಹಿರಿಯ ನಟ ಲೋಕನಾಥ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಲೋಕನಾಥ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಧ್ಯಾಹ್ನ 12 ರಿಂದ 2.30ರವರೆಗೂ ಅಂತಿಮ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಬನಶಂಕರಿಯಲ್ಲಿರುವ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ದೇವಾಂಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದ್ದು, ಪುತ್ರ ಅಶ್ವಿನ್ ಶ್ಯಾಂಡಿಲ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬನಶಂಕರಿ…
Author: News Desk Benkiyabale
ಪ್ರಪಂಚದ ಅತ್ಯಂತ ಜನಪ್ರಿಯ ಸಂದೇಶ ರವಾನೆ ವೇದಿಕೆ ವಾಟ್ಸಾಪ್ ಡಿಸೆಂಬರ್ 31 ರ ನಂತ್ರ ಕೆಲ ಮೊಬೈಲ್ ಗಳಲ್ಲಿ ತನ್ನ ಸೇವೆ ನಿಲ್ಲಿಸಲಿದೆ. ಫೇಸ್ಬುಕ್ ಸ್ವಾಮ್ಯದ ವಾಟ್ಸಾಪ್ ಈಗಾಗಲೇ ಈ ಬಗ್ಗೆ ಘೋಷಣೆ ಮಾಡಿದೆ. ಹಿಂದಿನ ವರ್ಷ ಕೂಡ ವಾಟ್ಸಾಪ್ ಕೆಲ ಫೋನ್ ಗಳಲ್ಲಿ ತನ್ನ ಸೇವೆ ಸ್ಥಗಿತಗೊಳಿಸಿತ್ತು. ವಿಂಡೋಸ್ ಫೋನ್ 8.0, ಬ್ಲ್ಯಾಕ್ಬೆರಿ ಒಎಸ್, ಬ್ಲ್ಯಾಕ್ಬೆರಿ 10 ನಲ್ಲಿ ವಾಟ್ಸಾಪ್ ಬರ್ತಿಲ್ಲ. ಡಿಸೆಂಬರ್ 31, 2017 ರ ನಂತ್ರ ಈ ಮೊಬೈಲ್ ಗೆ ಸೇವೆ ನೀಡುವುದನ್ನು ವಾಟ್ಸಾಪ್ ನಿಲ್ಲಿಸಿತ್ತು. ಈಗ ನೋಕಿಯಾದ ಎಸ್ 40 ಸರದಿ. ಡಿಸೆಂಬರ್ 31, 2018 ರ ನಂತ್ರ ಈ ಫೋನ್ ಬಳಕೆದಾರರು ವಾಟ್ಸಾಪ್ ಬಳಸಲು ಸಾಧ್ಯವಿಲ್ಲ. ಆಂಡ್ರಾಯ್ಡ್ 2. 3. 7 ಜಿಂಜರ್ಬ್ರೆಡ್ ಸ್ಮಾರ್ಟ್ಫೋನ್ ಹಾಗೂ ಐಫೋನ್ ಚಾಲನೆ ಮಾಡ್ತಿರುವ ಐಒಎಸ್ 7 ಸ್ಮಾರ್ಟ್ಫೋನ್ ಗಳಲ್ಲಿ 2020 ರವರೆಗೆ ಮಾತ್ರ ವಾಟ್ಸಾಪ್ ಬಳಸಬಹುದಾಗಿದೆ. …
ತುಮಕೂರು : ಶ್ರೀ ಶಿವಕುಮಾರಸ್ವಾಮೀಜಿ ಅನಾರೋಗ್ಯದ ಹಿನ್ನೆಲೆ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾನು ಕೂಡ ಸ್ವಾಮೀಜಿ ಅವರ ಪಾದ ಮುಟ್ಟಿ ನಮಸ್ಕಾರ ಮಾಡಿದೆ. ಪ್ರಸಾದ ಮಾಡಿಕೊಂಡು ಹೋಗಿ ಎಂದು ಸ್ವಾಮೀಜಿ ಕೈ ಸನ್ನೆ ಮಾಡಿದರು ಎಂದಿರುವ ಅವರು ಗಾಳಿ ಸುದ್ದಿಗೆ ಭಕ್ತರು ಕಿವಿಗೊಡಬೇಡಿ ಎಂದು ಇದೇ ವೇಳೆ ಮನವಿ ಮಾಡಿದರು. ಒಂದು ವಾರದಲ್ಲಿ ಸಂಪೂರ್ಣವಾಗಿ ಸ್ವಾಮೀಜಿ ಅವರು ಚೇತರಿಸಿಕೊಳ್ಳುತ್ತಾರೆ ಎಂದು ಇದೇ ವೇಳೆ ತಿಳಿಸಿದರು. ಶಾಸಕರಾದ ಜೆ.ಸಿ. ಮಾಧುಸ್ವಾಮಿ, ಮಾಜಿ ಶಾಸಕ ಸುರೇಶ್ ಗೌಡ, ಮಾಜಿ ಸಂಸದ ಜಿ.ಎಸ್. ಬಸವರಾಜ್ ಮತ್ತಿತರರು ಈ ವೇಳೆ ಹಾಜರಿದ್ದರು.
ತುಮಕೂರು: ಕಳೆದ ವರ್ಷದಂತೆ ಈ ವರ್ಷವೂ ಜನವರಿ 5 ಹಾಗೂ 6ರಂದು ನಗರದ ಗಾಜಿನಮನೆಯಲ್ಲಿ “ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಜನವರಿ 18ರಂದು ರಾಜ್ಯ ಮಟ್ಟದ ಮೇಳ ನಡೆಯುವುದರಿಂದ ಅದಕ್ಕೂ ಮುನ್ನ ಜಿಲ್ಲೆಯಲ್ಲಿ ಈ ಮೇಳವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೇಳದಲ್ಲಿ ರೈತರು ಬೆಳೆದ ವಿವಿಧ ಬಗೆಯ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುವುದಲ್ಲದೆ, ಸಾರ್ವಜನಿಕರಿಗೆ ಸಿರಿಧಾನ್ಯಗಳ ಉಪಯುಕ್ತತೆ ಬಗ್ಗೆ ಮಾಹಿತಿ ನೀಡಲಾಗುವುದೆಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಜಿಲ್ಲೆಯ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ ಈ ಮೇಳಕ್ಕೆ ಜಿಲ್ಲೆಯ ಸುಮಾರು 10 ಸಾವಿರ ರೈತರು ಆಗಮಿಸಲಿದ್ದಾರೆ ಎನ್ನುವ ನಿರೀಕ್ಷೆಯಿದೆ. ಕಳೆದ ಬಾರಿಗಿಂತ…
ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ನೀತಿಯನ್ನು ತೀವ್ರ ಸಂಕಷ್ಟಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಕೊರಟಗೆರೆ ತಾಲೂಕು ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯ ಅಜ್ಜಿಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಹೊಸ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ. ಕೃಷಿಯ ನಂತರ ಉದ್ಯೋಗ ಸೃಷ್ಟಿಸಿದ್ದ ನಿರ್ಮಾಣ ವಲಯ ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ನೀತಿಯನ್ನು ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಇದರಿಂದ ಆರ್ಥಿಕ ಸಂಚಲನವು ಸ್ಥಗಿತಗೊಂಡು ಕೃಷಿ, ವ್ಯಾಪಾರ ಮತ್ತು ಉದ್ಯೋಗದ ಮೇಲೆ ಬಾರೀ ಹಿನ್ನಡೆಗೆ ಕಾರಣವಾಗಿ ಕಾರ್ಮಿಕರ ಬದುಕು ದುಸ್ಥಿತಿಗೆ ಇಳಿದಿದೆ. ಆದ್ದರಿಂದ ನಿರ್ಮಾಣ ವಲಯವನ್ನು ರಕ್ಷಿಸಲು ಮತ್ತು ದೇಶದ ಅಭಿವೃದ್ಧಿಗೆ…
ತುಮಕೂರು: ಕ್ಷಯರೋಗದ ಬಗ್ಗೆ ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾದ್ಯಂತ ಜನವರಿ 2 ರಿಂದ 12ರವರೆಗೆ “ಸಕ್ರಿಯ ರೋಗ ಪತ್ತೆ ಆಂದೋಲನ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರ ಡಾ: ಸನತ್ ತಿಳಿಸಿದ್ದಾರೆ. ಈ ಆಂದೋಲನದಲ್ಲಿ ನಿಯೋಜಿತ ತಂಡವು ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಮನೆಗಳಿಗೆ ಭೇಟಿ ನೀಡಿ ರೋಗದ ಜನಜಾಗೃತಿ ಮೂಡಿಸಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಫ ಸಂಗ್ರಹಣೆ ಮಾಡಿ ಆ ದಿನವೇ ಕಫ ಪರೀಕ್ಷೆ ಮಾಡಲಾಗುವುದು. ಕಫದಲ್ಲಿ ಕ್ರಿಮಿಗಳು ಪತ್ತೆಯಾದಲ್ಲಿ ಅಂದಿನಿಂದಲೇ ಚಿಕಿತ್ಸೆ ಪ್ರಾರಂಭಿಸಲಾಗುವುದು. ಭಿತ್ತಿಪತ್ರ ಬಿಡುಗಡೆ:- ಆಂದೋಲನದ ಪ್ರಯುಕ್ತ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದು ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಬಿ.ಆರ್.ಚಂದ್ರಿಕಾ, ಆರ್ಸಿಹೆಚ್ ಅಧಿಕಾರಿ ಡಾ: ಕೇಶವ್ರಾಜ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ: ಆರ್.ವಿ.ಮೋಹನ್ದಾಸ್, ಡಿಪಿಸಿ…
ಬೆಂಗಳೂರು: ಹಾಸನವನ್ನ ಪ್ರಜ್ವಲ್ ಗೆ ಬಿಟ್ಟುಕೊಡ್ತೇನೆ ಅಂತ ಮಾಜಿ ಪಿಎಂ ಹೆಚ್.ಡಿ ದೇವೇಗೌಡ್ರು ಘೋಷಣೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿ, ಪ್ರಜ್ವಲ್ ಹಾಸನದಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ನಾನು ಹಾಸನ ಲೋಕಸಭಾ ಕ್ಷೇತ್ರವನ್ನು ಅವನಿಗೆ ಬಿಟ್ಟುಕೊಡುತ್ತೇನೆ ಎಂದರು. ಈ ಮೂಲಕ ಅಧಿಕೃತವಾಗಿ ಮುಂದಿನ ಲೋಕಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣನವರು ಪ್ರವೇಶ ಮಾಡುವುದು ಬಹುತೇಕ ಫಿಕ್ಸ್ ಆಗಿದೆ.
ತುಮಕೂರು: ಬೆಸ್ಕಾಂ ಕುಣಿಗಲ್ ವಿಭಾಗ ಕಚೇರಿಯಲ್ಲಿ ಇಂದು ವಿದ್ಯುತ್ ಅಪಘಾತ ತಡೆಯುವ ನಿಟ್ಟಿನಲ್ಲಿ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಬಸವರಾಜು ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಇಲಾಖೆಯ ಸಿಬ್ಬಂದಿ ವರ್ಗದವರು, ತಾವು ಕಾರ್ಯನಿರ್ವಹಿಸುವ ವೇಳೆ ಇಲಾಖೆ ನೀಡಿರುವ ಸುರಕ್ಷತಾ ಸಾಧನಗಳನ್ನು ಬಳಸಿಕೊಂಡು, ಅಪಘಾತರಹಿತ ಕಾರ್ಯನಿರ್ವಹಣೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಈಗಾಗಲೇ ನೌಕರರಿಗೆ ಹರ್ತರಾಡ್,ಹೆಲ್ಮೇಟ್ಗಳು,ಸೇಪ್ಟಿ ಶೂ, ಕಟ್ಟಿಂಗ್ ಪ್ಲೇಯರ್,ಸೇಪ್ಟಿ ಬೆಲ್ಟ್ ಅಳವಡಿಸಿಕೊಂಡು, ವಿದ್ಯುತ್ ಮಾರ್ಗಮುಕ್ತಗೊಳಿಸಿ ಕೆಲಸ ಮಾಡುವುದರಿಂದ ಶೇ100ಕ್ಕೆ ನೂರಷ್ಟು ವಿದ್ಯುತ್ ಅವಘಡಗಳನ್ನು ತಡೆ ಹಿಡಿಯ ಬಹುದಾಗಿದೆ.ಆದ್ದರಿಂದ ನೌಕರರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಇಲಾಖೆಯನ್ನು ಅಪಘಾತ ರಹಿತ ಸಂಸ್ಥೆಯನ್ನಾಗಿಸಲು ಮುಂದಾಗುವಂತೆ ಮನವಿ ಮಾಡಿದರು. ಲೆಕ್ಕಾಧಿಕಾರಿ ಬಿ.ವಿ.ನಾಗರಾಜು ಮಾತನಾಡಿ,ಇಲಾಖೆಯಲ್ಲಿ ನೌಕರರ ಸುರಕ್ಷತೆ ಕುರಿತಂತೆ ಆಗಿಂದಾಗ್ಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಆದರೂ ಸಹ ಅಪಘಾತಗಳು ನಡೆಯುತ್ತಲೇ ಇವೆ.ನೌಕರರು ಹಿರಿಯ ಅಧಿಕಾರಿಗಳು…
ತುಮಕೂರು: ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನವನ್ನು ನಾವು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ “ವಿಶ್ವ ಮಾನವ ದಿನಾಚರಣೆ”ಯನ್ನಾಗಿ ಆಚರಿಸುತ್ತಿದ್ದು, ರೈತರು ಬೆಳೆದ ಬೆಳೆಗೆ ಮತ್ತು ರೈತರ ಆತ್ಮಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ ಕುವೆಂಪು ಅವರೇ ಮಹಾನ್ ಚೇತನ ಎಂದು ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗುರುಶ್ರೀ ಕಾಲೇಜ್ ಆಫ್ ಕಾಮರ್ಸ್ ಅಂಡ್ ಸೋಷಿಯಲ್ ವರ್ಕ್ನ ಸಂಯುಕ್ತಾಶ್ರಯದಲ್ಲಿಂದು ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ “ವಿಶ್ವ ಮಾನವ ದಿನಾಚರಣೆ”ಯನ್ನು ಉದ್ಘಾಟಿಸಿ ಮಾತನಾಡಿದರು. ಕುವೆಂಪು ಅವರು ತೀರ್ಥಹಳ್ಳಿಯಲ್ಲಿ ಹುಟ್ಟಿ, ಅತ್ಯಂತ ಸರಳ ವಿಚಾರ, ಸಾಹಿತ್ಯ, ಕಾವ್ಯಗಳನ್ನು ರಚಿಸಿ ಜನರ ಮನ ಮುಟ್ಟುವಂತೆ ಮಾಡಿದ್ದಾರೆ. ಅವರಿಂದ ಕನ್ನಡ ಸಾಹಿತ್ಯಕ್ಕೆ ಅನೇಕ ಪ್ರಶಸ್ತಿಗಳು ದೊರೆತಿವೆ. ವಿಶ್ವ ಮಾನವ ತತ್ವವನ್ನು ಜಗತ್ತಿಗೆ ಸಾರಿದ ಮಹಾನ್…
ಉಡುಪಿ: ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಂತ ಊರು ಕುಂದಾಪುರ ತಾಲೂಕಿನ ಯೆಡಾಡಿಯಲ್ಲಿ ರವಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಶನಿವಾರ ಬೆಳಗ್ಗೆ 11ರಿಂದ 2 ಗಂಟೆ ತನಕ ಯಲಹಂಕದಲ್ಲಿರುವ ಸಶಸ್ತ್ರ ಪೊಲೀಸ್ ಪಡೆಯ ತರಬೇತಿ ಶಾಲೆಯ ಆವರಣದಲ್ಲಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಗುವುದು. ಇಂದು ರಾತ್ರಿ 11 ಗಂಟೆಗೆ ಪಾರ್ಥಿವ ಶರೀರ ಮಧುಕರ ಶೆಟ್ಟಿಯವರ ಊರಿಗೆ ತಲುಪಲಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ಆಗ್ರಹ: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವು ಕುರಿತ ವರದಿಯನ್ನು ಆಧರಿಸಿ ಸಂಶಯವಿದ್ದರೆ ತನಿಖೆಗೆ ಆದೇಶ ಮಾಡುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. …