Author: News Desk Benkiyabale

 ತುಮಕೂರು:       ಪೌರಾಣಿಕ ನಾಟಕಗಳ ತವರೂರಾಗಿರುವ ತುಮಕೂರು ಜಿಲ್ಲೆಯಲ್ಲಿ ಕಲಾವಿದರಿಗೆ ಜನರು ಗೌರವ ನೀಡುತ್ತಾರೆ, ಸುದೀರ್ಘವಾಗಿ ನಾಟಕಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿರುವ ಕಲಾವಿದರನ್ನು ಗುರುತಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.       ನಗರದ ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ಹನುಮಜಯಂತಿ ಅಂಗವಾಗಿ ಕೋಟೇ ಆಂಜನೇಯಸ್ವಾಮಿ ಸೇವಾ ಸಮಿತಿ, ಕೆಂಪೇಗೌಡ ಕಲಾಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಸಂಪೂರ್ಣ ರಾಮಾಯಣ ನಾಟಕದಲ್ಲಿ ಹಿರಿಯ ಕಲಾವಿದ ್ಲ ಕೆ.ಎಚ್.ನಾಗರಾಜ್ À ಪತ್ನಿ ಹೇಮಾವತಿ, ಅವರಿಗೆ ಬೆಳ್ಳಿ ಕಿರೀಟ ಪ್ರದಾನ ಮಾಡಿ ಅವರು ಮಾತನಾಡಿದರು.       ಕಲಾವಿದರಿಗೆ ಬೆಳ್ಳಿ ಕಿರೀಟ ಪ್ರದಾನ ಮಾಡುವುದೆಂದರೆ, ಗೌರವ ಡಾಕ್ಟರೇಟ್ ಪಡೆದಂತೆ, ಗೌರವ ಡಾಕ್ಟರೇಟ್ ಪಡೆಯಲು ಲಾಬಿ ನಡೆಸಬೇಕು ಆದರೆ, ನಾಟಕಗಳಲ್ಲಿ ಅವರು ಪೋಷಿಸಿರುವ ಪಾತ್ರಗಳು ಹಾಗೂ ಅವರ ಸುಧೀರ್ಘ ಸೇವೆಯನ್ನು ಗುರುತಿಸಿ, ಕಲಾವಿದರೆ ನೀಡುವ ಬೆಳ್ಳಿ ಕಿರೀಟ, ಗೌರವ ಡಾಕ್ಟರೇಟ್‍ಗೆ ಸಮವಾಗಿದೆ. ಪ್ರವೃತಿಯಲ್ಲಿ ರಂಗಭೂಮಿ ಸೇವೆಯನ್ನು…

Read More

ಚಿಕ್ಕನಾಯಕನಹಳ್ಳಿ :       ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಇದರ ಉಪಯೋಗ ಪಡೆದು ಪ್ರಧಾನಿ ಗದ್ದುಗೆಯಿಂದ ಮೋದಿ ಸರ್ಕಾರವನ್ನು ಉರುಳಿಸಿ ರಾಹುಲ್‍ಗಾಂಧಿಯವರನ್ನು ಪ್ರಧಾನಮಂತ್ರಿ ಮಾಡಲು ಇದು ಸಕಾಲ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.       ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆ ಮತ್ತು ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ಭವಿಷ್ಯವಿಲ್ಲ ಎಂಬ ಸನ್ನಿವೇಶವನ್ನು ನಿರ್ಮಿಸಿದ್ದ ಮೋದಿ ಹೇಳಿಕೆ ಕೊಡುತ್ತಿದ್ದರು ಆದರೆ ಈಗ ಉತ್ತರ ಭಾರತದ 3 ರಾಜ್ಯಗಳಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದಿದೆ, ಇಂತಹ ಸಂದರ್ಭದಲ್ಲಿ ಕಾರ್ಯಕರ್ತರು ಹಗಲು ಇರುಳು ದುಡಿದು ರಾಹುಲ್ ಗಾಂಧೀಯವರನ್ನು ಪ್ರಧಾನಮಂತ್ರಿ ಮಾಡಲು ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.       ದೇಶದಲ್ಲಿ ಆಗುತ್ತಿರುವ ಪರಿವರ್ತನೆಯನ್ನು ತಿಳಿದು ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಶಕ್ತಿ ಕಾರ್ಯಕ್ರಮದ ಮೂಲಕ ಗ್ರಾಮೀಣ ಯುವಕರನ್ನು ಕಾಂಗ್ರೆಸ್ಸಿಗೆ ಸೆಳೆಯಲು ಕಾರ್ಯಕರ್ತರು ಶ್ರಮಿಸಿ ಎಂದ ಅವರು, ರಾಫೇಲ್…

Read More

ತುಮಕೂರು:       ಜಿಲ್ಲೆಯಲ್ಲಿ ಕಳೆದ 3-4 ತಿಂಗಳುಗಳಿಂದ ಪರಿತ್ಯಕ್ತ ಮಕ್ಕಳ ಪ್ರಕರಣಗಳು ಹೆಚ್ಚಾಗುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವಿಷಾದ ವ್ಯಕ್ತಪಡಿಸಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಶಾ/ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎ.ಎನ್.ಎಂ.ಗಳಿಗಾಗಿ ನಗರದ ಬಾಲಭವನದಲ್ಲಿಂದು ಆಯೋಜಿಸಿದ್ದ “ಪರಿತ್ಯಕ್ತ ಮಕ್ಕಳು ಮತ್ತು ರಕ್ಷಣೆ, ಕೌಟುಂಬಿಕ ದೌರ್ಜನ್ಯ ತಡೆ, ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟ ನಿಷೇಧ” ಕಾಯ್ದೆ ಕುರಿತು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಜಿಲ್ಲೆಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ ಒಂದು ದಿನದ ಹಸುಗೂಸಿನಿಂದ ಹಿಡಿದು 4 ತಿಂಗಳಿನ ಎಳೆ ಕಂದಮ್ಮಗಳವರೆಗೆ ಒಟ್ಟು 17 ಮಕ್ಕಳು ಬೀದಿಯಲ್ಲಿ, ಕಸದ ತೊಟ್ಟಿಯಲ್ಲಿ, ದೇವಸ್ಥಾನಗಳಲ್ಲಿ, ಗಿಡದ ಪೊದೆಗಳಲ್ಲಿ…

Read More

 ತುಮಕೂರು:       ಸರ್ಕಾರದಿಂದ ದೊರೆಯುವ ಅನೇಕ ಸೌಲಭ್ಯಗಳನ್ನು ವಿಕಲ ಚೇತನರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್ ಅವರು ವಿಕಲ ಚೇತನರಿಗೆ ಕರೆ ನೀಡಿದರು.       ಜಿಲ್ಲಾ ಪಂಚಾಯತ್ ಆವರಣದಲ್ಲಿಂದು ಜರುಗಿದ ಜಿಲ್ಲಾ ಪಂಚಾಯತ್ ಶೇ.3ರ ಅನುದಾನದಲ್ಲಿ ತುಮಕೂರು ತಾಲ್ಲೂಕು ವಿಕಲಚೇತನರಿಗೆ ವಿಕಲಚೇತನ ಸ್ನೇಹಿ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.       ವಿಕಲ ಚೇತನರ ಕಲ್ಯಾಣಕ್ಕಾಗಿ ಸರ್ಕಾರವು ಅನೇಕ ಸೌಲಭ್ಯಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಸೌಲಭ್ಯಗಳನ್ನು ವಿಕಲ ಚೇತನರು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ ಸಮಾಜದಲ್ಲಿ ಮುಂದೆ ಬರಬೇಕು. ಇಂದು ತುಮಕೂರು ತಾಲ್ಲೂಕಿನ 25  ಮಂದಿ ವಿಕಲಚೇತನರಿಗೆ ದ್ವಿಚಕ್ರ ವಾಹನವನ್ನು ವಿತರಿಸಲಾಗಿದ್ದು, ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ಅವರು ಕರೆ ನೀಡಿದರು.       ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು 2015-16 ಮತ್ತು 2016-17ನೇ ಸಾಲಿನ ಜಿಲ್ಲಾ ಪಂಚಾಯತಿ…

Read More

ಬೆಂಗಳೂರು:       ಕರ್ನಾಟಕ ಪದವಿಪೂರ್ವ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 18ವರೆಗೆ ಪರೀಕ್ಷೆ ನಡೆಯಲಿವೆ ಎಂದು ಪಿಯು ಮಂಡಳಿ ತಿಳಿಸಿದೆ. ಭೌತಶಾಸ್ತರ ಮತ್ತು ಅರ್ಥಶಾಸ್ತ್ರದಿಂದ ಪ್ರಾರಂಭವಾಗುವ ಪರೀಕ್ಷೆಗಳು ಮಾರ್ಚ್ 18ರಂದು ಇಂಗ್ಲೀಷ್ ಪರೀಕ್ಷೆ ಮೂಲಕ ಮುಕ್ತಾಯವಾಗಲಿವೆ. ಪಿಯುಸಿ ಪರೀಕ್ಷೆ ವೇಳಾಪಟ್ಟಿ ಮಾರ್ಚ್ 1: ಭೌತಶಾಸ್ತ್ರ ಮತ್ತು ಅರ್ಥಶಾಸ್ತ್ರ ಮಾರ್ಚ್ 5: ಪ್ರಥಮ ಭಾಷೆ ಮಾರ್ಚ್ 7: ಐಚ್ಛಿಕ ಕನ್ನಡ, ಗಣಿತ ಮತ್ತು ಅಕೌಂಟೆನ್ಸಿ ಮಾರ್ಚ್ 9: ರಾಜ್ಯಶಾಸ್ತ್ರ ಮತ್ತು ಸ್ಟಾಟಿಸ್ಟಿಕ್ಸ್ (ಅಂಕಿಶಾಸ್ತ್ರ) ಮಾರ್ಚ್ 11: ಸಮಾಜಶಾಸ್ತ್ರ, ರಾಸಾಯನಿಕ ಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ ಮಾರ್ಚ್ 13: ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮಾರ್ಚ್ 14: ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಮಾರ್ಚ್ 16: ಕನ್ನಡ ಮಾರ್ಚ್ 18: ಇಂಗ್ಲೀಷ್

Read More

ಕೋಲಾರ:       ಶಾಲಾ ಶೌಚಾಲಯದ ಕಟ್ಟಡ ಕುಸಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮುಳಬಾಗಿಲು ಪಟ್ಟಣದ‌ ಗುಣಿಗುಂಟೆ ಪಾಳ್ಯದಲ್ಲಿ ನಡೆದಿದೆ.       ಮೊರಾರ್ಜಿ ದೇಸಾಯಿ ಶಾಲೆಯ ಶೌಚಾಲಯದ ಕಟ್ಟಡ‌ ಕುಸಿದು ದುರ್ಘಟನೆ ಸಂಭವಿಸಿದ್ದು, ಪರಿಣಾಮ 6ನೇ ತರಗತಿ ವಿದ್ಯಾರ್ಥಿನಿ ಜೋಸ್ನಾ ಮೃತಪಟ್ಟಿದ್ದಾಳೆ.       ದೇವರಾಯ ಸಮುದ್ರದ ಕೀಳುಹೊಳಲಿಯ 12 ಎಕರೆ ಜಮೀನಿನಲ್ಲಿ 21 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಆದರಿಂದ ವಸತಿ ಶಾಲೆಯನ್ನು ಇರ್ಷಾದ್ ಎಂಬುವವರಿಗೆ ಸೇರಿದ ಖಾಸಗಿ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ವೇಳೆ ಏಕಾಏಕಿ ಕಟ್ಟಡ ಕುಸಿದ ಪರಿಣಾಮ ಆಕೆ ಅವಶೇಷಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.        ಖಾಸಗಿ‌ ಕಟ್ಟಡದಲ್ಲಿದ್ದ ಈ ಶಾಲೆಯು ರಾಜಕಾಲುವೆ ಪಕ್ಕದಲ್ಲಿ ಇದ್ದುದರಿಂದ ತೇವಾಂಶ ಹೆಚ್ಚಾಗಿ ಕುಸಿದಿರುವ ಶಂಕೆ ವ್ಯಕ್ತವಾಗಿದೆ.  ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಹಾಗೂ ಮುಳಬಾಗಿಲು ನಗರ ಪೊಲೀಸರ ಭೇಟಿ…

Read More

ಬೆಳಗಾವಿ :       ವಿಧಾನ ಪರಿಷತ್‍ನ ನೂತನ ಉಪ ಸಭಾಪತಿಯಾಗಿ ಜೆಡಿಎಸ್‍ನ ಹಿರಿಯ ಮುಖಂಡ ಎಸ್.ಎಲ್.ಧರ್ಮೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.      ಇಂದು ಬೆಳಗ್ಗೆ ಪರಿಷತ್‍ನ ಕಲಾಪ ಆರಂಭವಾಗುತ್ತಿ ದ್ದಂತೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಎಸ್.ಎಲ್.ಧರ್ಮೇಗೌಡ ಅವರು ಪರಿಷತ್‍ನ ಉಪಸಭಾಪತಿಯಾಗಿ ಅವಿರೋಧ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಿದರು.

Read More

ತುಮಕೂರು:       ರಫೇಲ್ ಯುದ್ಧ ವಿಮಾನ ಖರೀದಿಯ ಒಪ್ಪಂದದ ಬಗ್ಗೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.       ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.        ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಜಿ.ಎಸ್. ಬಸವರಾಜು, ಬಹುಕೋಟಿ ರಫೇಲ್ ಯುದ್ಧ ವಿಮಾನ ಖರೀದಿಯ ಒಪ್ಪಂದದಲ್ಲಿ ಅವ್ಯವಹಾರಗಳು ನಡೆದಿದೆ ಎಂದು ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆದಿಲ್ಲ ಎಂದರು.       ರಫೇಲ್ ಯುದ್ಧ ವಿಮಾನವು ಗುಣಮಟ್ಟದಲ್ಲಿ ಉನ್ನತಿ ಹೊಂದಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕಾಂಗ್ರೆಸ್ ಪಕ್ಷವು ರಕ್ಷಣಾ ವಿಷಯದಲ್ಲಿ ಹಲವು ಅವ್ಯವಹಾರ ಮಾಡಿದ್ದನ್ನು ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ…

Read More

ತುಮಕೂರು:       ಸಿದ್ಧಗಂಗೆಯ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿಗಳು ಇಂದು ಚೆನ್ನೈನ ರೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ವಿಶೇಷ ಆಂಬುಲೆನ್ಸ್​ನಲ್ಲಿ ಇಂದು ಮಠಕ್ಕೆ ಮರಳಿದ್ದಾರೆ.       ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಠಕ್ಕೆ ಆಗಮಿಸಿದ ಶ್ರೀಗಳು ನೇರವಾಗಿ ಹಳೇ ಮಠದ‌ ಕೊಠಡಿಗೆ ತೆರಳಿದರು. ಶ್ರೀಗಳನ್ನು ನೋಡುವುದಕ್ಕೆ ಮಠದ ವಿದ್ಯಾರ್ಥಿಗಳು, ಲಕ್ಷಾಂತರ ಭಕ್ತಾದಿಗಳು ಉರಿಬಿಸಿಲನ್ನು ಲೆಕ್ಕಿಸದೇ ಶ್ರೀ ಮಠದ ಆವರಣದಲ್ಲಿ ಶ್ರೀಗಳ ಬರುವಿಕೆಗಾಗಿ ಕಾಯ್ದು ಶ್ರೀಗಳನ್ನು ನೋಡಿ ಸಂತೋಷಪಟ್ಟರು.       ಇನ್ನು ಮುಂದಿನ 15 ದಿನ ಸ್ವಾಮೀಜಿ ದರ್ಶನಕ್ಕೆ ಮಠದಲ್ಲಿ ಅವಕಾಶವಿಲ್ಲ ಎನ್ನಲಾಗಿದ್ದು, ಸ್ವಾಮೀಜಿ ಆರೋಗ್ಯವಾಗಿದ್ದು ಇಷ್ಟಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸ್ವೀಕರಿಸುತ್ತಾರೆ, ಮುಂದಿನ 15 ದಿನ ಸ್ವಾಮೀಜಿ ದರ್ಶನಕ್ಕೆ ಮಠದಲ್ಲಿ ಅವಕಾಶವಿಲ್ಲ, ಸ್ವಾಮೀಜಿ ಆರೋಗ್ಯವಾಗಿದ್ದು ಇಷ್ಟಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸ್ವೀಕರಿಸುತ್ತಾರೆ. ಗಣ್ಯರು, ಭಕ್ತರು ದರ್ಶನಕ್ಕೆ ಕೆಲವು ದಿನ ಬರಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ. …

Read More

ತುರುವೇಕೆರೆ:        ಓದಿನಷ್ಟೇ ಕ್ರೀಡೆಯೂ ಮಕ್ಕಳಿಗೆ ಅತಿಮುಖ್ಯವಾಗಿದ್ದು ಶಿಕ್ಷಕರು ಹಾಗು ಪೋಷಕರು ಮಕ್ಕಳಲ್ಲಿ ಕ್ರೀಢೆ ಬಗ್ಗೆ ವಿಶೇಷ ಆಶಕ್ತಿ ಮೂಡುವಂತೆ ಮಾಡಬೇಕಾಗಿದೆ ಎಂದು ಧೈಹಿಕ ಶಿಕ್ಷಣಧಿಕಾರಿ ಚಿದಾನಂದ್ ತಿಳಿಸಿದ್ದಾರೆ.       ಪಟ್ಟಣದ ವಿಶ್ವವಿಜಯ ವಿಧ್ಯಾಶಾಲೆ ಹಾಗು ರಿಯಾ ಪ್ಲೇಹೋಂ ವತಿಯಿಂದ ಶಾಲಾ ವಾರ್ಷಿಕ ಕ್ರೀಡಾಕೂಟ ಉಧ್ಘಾಟನೆಯನ್ನು ನೆರವೇರಿಸಿ  ಮಾತನಾಡಿದ ಅವರು, ಇತ್ತೀಚೆಗೆ ಮೊಬೈಲ್ ಹಾಗು ಟಿ.ವಿ ಮಾದ್ಯಮಗಳ ಹಾವಳಿಯಿಂದ ಮಕ್ಕಳಲ್ಲಿ ಕ್ರೀಡೆಗಳಲ್ಲಿ ಆಶಕ್ತಿ ಕಡಿಮೆಯಾಗುತ್ತಿದೆ.  ಓದಿನಷ್ಟೇ ಕ್ರೀಡೆಯೂ ಮಕ್ಕಳಿಗೆ ಅತಿಮುಖ್ಯವಾಗಿದ್ದು ಶಿಕ್ಷಕರು ಹಾಗು ಪೋಷಕರು ಮಕ್ಕಳಲ್ಲಿ ಕ್ರೀಢೆ ಬಗ್ಗೆ ವಿಶೇಷ ಆಶಕ್ತಿ ಮೂಡುವಂತೆ ಮಾಡಬೇಕಾಗಿದೆ. ಸರ್ಕಾರ ಕ್ರೀಡೆಗೂ ಹೆಚ್ಚು ಸಹಕಾರ ನೀಡುತ್ತಿದ್ದು ಪೋಷಕರು ಇದರ ಸೌಲಭ್ಯ ಮಕ್ಕಳಿಗೆ ದೊರಕುವಂತೆ ಉತ್ತೇಜಿಸಬೇಕು ಎಂದರು.       ಕಸಾಪ ತಾಲ್ಲೂಕು ಅಧ್ಯಕ್ಷ ನಂ.ರಾಜು ಮಾತನಾಡಿ ಕ್ರೀಡೆಯಲ್ಲಿ ಸೋಲೆ ಗೆಲುವಿನ ಮೆಟ್ಟಿಲಾಗಿದ್ದು ಮರಳಿ ಯತ್ನವ ಮಾಡು ಎಂಬಂತೆ ಮಕ್ಕಳು ದೃತಿಗೆಡದೆ ಆಶಕ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಉತ್ತೇಜಿಸಿದರು.       ಶಾಲಾ ಕಾರ್ಯದರ್ಶಿ ಎಂ.ವಿಶ್ವೇಶ್ವರಯ್ಯ…

Read More