ಚಿಕ್ಕನಾಯಕನಹಳ್ಳಿ : ನವೋದಯ ಕಾಲೇಜಿನ ಆವರಣದಲ್ಲಿ ಡಿ.24ರಂದು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಅನುಕೂಲವನ್ನು ಪಡೆಯಬೇಕು ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಕ್ಯಾನ್ಸರ್ ಖಾಯಿಲೆ ಬಂದರೆ ರೋಗಿಯು ಸಾವನ್ನಪ್ಪುತ್ತಾನೆ, ಕ್ಯಾನ್ಸರ್ ಖಾಯಿಲೆಯನ್ನು ಮೊದಲ ಹಂತದಲ್ಲೇ ಗುರುತಿಸಿ ಸರಿಯಾದ ಚಿಕಿತ್ಸೆ ಪಡೆದರೆ ರೋಗಿಯು ಗುಣಮುಖಿಯಾಗಿ ಬದುಕುತ್ತಾನೆ, ಈ ನಿಟ್ಟಿನಲ್ಲಿ ತಾಲ್ಲೂಕಿನ ಜನರ ಹಿತಾಸಕ್ತಿಗಾಗಿ ಕ್ಯಾನ್ಸರ್ ಶಿಬಿರವನ್ನು ನವೋದಯ ಸಂಸ್ಥೆ ಆಡಳಿತ, ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿದೆ ಎಂದರು. ತಾಲ್ಲೂಕು ಆರೋಗ್ಯ ಇಲಾಖೆಯು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬರುವ ರೋಗಿಯನ್ನು ಗುರುತಿಸಿ ಶಿಬಿರಕ್ಕೆ ಕರೆತನ್ನಿ ಎಂದು ಸೂಚನೆ ನೀಡಿದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ 10ರಿಂದ 12ಜನ ನುರಿತ ವೈದ್ಯರ ತಂಡ ಶಿಬಿರಕ್ಕೆ ಆಗಮಿಸುತ್ತಿದ್ದು ಶಿಬಿರದಲ್ಲಿ ಕ್ಯಾನ್ಸರ್ ರೋಗವನ್ನು ತಪಾಸಣೆ ಮಾಡಿ ಖಾಯಿಲೆ…
Author: News Desk Benkiyabale
ಗುಬ್ಬಿ : ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿಯ ಮಾದಾಪುರ ಗ್ರಾಮದಲ್ಲಿ ರೈತನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಸಣ್ಣ ಕೈಗಾರಿಕಾ ಸಚಿವರ ತವರೂರಲ್ಲೇ ರೈತನು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಸಾರ್ವಜನಿಕರು ಇಂತಹ ಬರಗಾಲದಲ್ಲಿ ಯಾವ ರೈತನು ಬದುಕನ್ನು ಸಾಗಿಸುತ್ತಾನೆ. ಸಾಲ ಕೊಟ್ಟವರ ಮಾನಸಿಕ ಹಿಂಸೆಯನ್ನು ತಡೆಯಲಾರದೆ ವಿಷ ಕುಡಿದು ನೇಣಿಗೆ ಶರಣಾಗುವ ಘಟನೆಗಳು ಹೆಚ್ಚಾಗುತ್ತಿವೆ. ತಾಲ್ಲೂಕಿನ ಮಾದಾಪುರ ಗ್ರಾಮದ ಎಂ.ಪಿ.ಮಂಜುನಾಥ್ (40ವರ್ಷ) ಈತನಿಗೆ ನಾಲ್ಕು ಎಕರೆ ಜಮೀನಿದ್ದು ಆ ಜಮೀನನಲ್ಲಿ ಇಲ್ಲಿಯವರೆಗೂ ಒಟ್ಟು ಕುಟುಂಬವನ್ನು ಕಾಪಾಡಿಕೊಂಡು ಬರುತ್ತಿದ್ದು ಹಿಂದಿನ ವರ್ಷಗಳಲ್ಲಿ ಅಂತರ್ಜಲ ಕುಸಿದ ಕಾರಣ ಕೊಳವೆ ಬಾವಿಯು ಬತ್ತಿದ್ದು ಪಕ್ಕದಲ್ಲೇ ಇರುವ ಬಿದರೆ ಗ್ರಾಮದಲ್ಲಿರುವ ಕೆ.ಜಿ.ಬಿ.ಬ್ಯಾಂಕ್ನಲ್ಲಿ 4 ಲಕ್ಷ ಸಾಲ ಪಡೆದು ಹೊಸ ಕೊಳವೆಬಾವಿಯನ್ನು ಕೊರೆಸಿದ್ದು ಇಷ್ಟೆಲ್ಲ ಖರ್ಚು ಮಾಡಿ ಕೇವಲ 6 ದಿನ ಮಾತ್ರ ನೀರನ್ನು ಕಂಡಿದ್ದು ಮುಂದಿನ ದಿನಗಳಲ್ಲಿ ಯಾವುದೇ ಹನಿ ನೀರು ಈ ಕೊಳವೆ ಬಾವಿಯಿಂದ ದೊರಕದೆ…
ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಪ್ರತಿಷ್ಠಿತ ರೇಲಾ ಆಸ್ಪತ್ರೆಗೆ ದಾಖಲಾಗಿರುವ ತುಮಕೂರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ನ ಪ್ರಖ್ಯಾತ ವೈದ್ಯರಾದ ಮಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜಿಎಸ್ ನ ಡಾ. ರವೀಂದ್ರ ಅವರ ಉಪಸ್ಥಿತಿಯಲ್ಲೇ ಶಸ್ತ್ರಚಿಕಿತ್ಸೆ ನಡೆದಿದೆ. ಮೇದೋಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗಲು 11 ಸ್ಟಂಟ್ಗಳನ್ನು ಅಳವಡಿಸಲಾಗಿದೆ. ಮೇದೋಜೀರಕ ಗ್ರಂಥಿಯಿಂದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಈ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರು ವುದರಿಂದ ಸಣ್ಣ ಪ್ರಮಾಣದ ಸರ್ಜರಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಸದ್ಯಕ್ಕೆ ಶ್ರೀಗಳನ್ನು ಆಪರೇಶನ್ ಥಿಯೇಟರ್ ನಿಂದ ಐಸಿಯು ವಾರ್ಡ್ ಗೆ ಶಿಫ್ಟ್…
ತುಮಕೂರು: ಮೈತ್ರಿ ಸರಕಾರದ ಮುಖ್ಯಮಂತ್ರಿ ಸ್ಥಾನದಿಂದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕಾಂಗ್ರೆೆಸ್ನ ಮೂವರು ಹಿರಿಯ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೀಘ್ರವೇ ಸಿಎಂ ಗಾದಿಯಿಂದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕಾಂಗ್ರೆೆಸ್ನ ಮೂವರು ಮಾಡುತ್ತಿರುವ ಹುನ್ನಾರಕ್ಕೆೆ ಶಾಸಕರು ಕೂಡ ಕೈ ಜೋಡಿಸಿದ್ದಾರೆ ಎಂದು ಹೇಳಿದರು. ಆ ಮೂವರು ಹಿರಿಯ ನಾಯಕರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಆಪರೇಷನ್ ಕಮಲ ಎಂಬ ಬೆದರುಬೊಂಬೆ ಇಟ್ಟುಕೊಂಡು ಹುನ್ನಾರ ನಡೆಸುತ್ತಿದ್ದು, ಜೆಡಿಎಸ್ ಮುಖಂಡರನ್ನು ಹೆದರಿಸುತ್ತಿದ್ದಾರೆ. ಮೂವರು ನಾಯಕರಲ್ಲಿ ಒಬ್ಬರು ಸಚಿವರು ಮತ್ತು ಇನ್ನಿಬ್ಬರು ಸಚಿವ ಸ್ಥಾನದ ಆಕಾಂಕ್ಷಿಗಳು ಎಂದರು. ಇವರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.
ಕೊರಟಗೆರೆ: ಕರುನಾಡಿನ ಪುಣ್ಯಕ್ಷೇತ್ರ ಶ್ರೀಗೊರವನಹಳ್ಳಿ ಮಹಾಲಕ್ಷ್ಮೀ ದೇವಿಯ ಬ್ರಹ್ಮ ರಥೋತ್ಸವ ಮತ್ತು ಲಕ್ಷ ದಿಪೋತ್ಸವ ಕಾರ್ಯಕ್ರಮ ಕಾರ್ತಿಕ ಮಾಸದ ಕೊನೆಯ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಕಲ್ಪತರು ನಾಡು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸುಪ್ರಸಿದ್ದ ಪ್ರವಾಸಿ ಪುಣ್ಯಕ್ಷೇತ್ರ ಆಗಿರುವ ಗೊರವನಹಳ್ಳಿ ಮಹಾಲಕ್ಷ್ಮೀ ಸನ್ನಿದಾನಕ್ಕೆ ಶುಕ್ರವಾರ ಮುಂಜಾನೆಯಿಂದ ರಾತ್ರಿ 8ಗಂಟೆಯ ವರೇಗೂ ಸಾವಿರಾರು ಭಕ್ತಾಧಿಗಳು ಸರದಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದರು. ಶುಕ್ರವಾರ ಮುಂಜಾನೆ 8ಗಂಟೆಯಿಂದ ಪ್ರಾರಂಭವಾದ ವಿಶೇಷ ಪೂಜಾ ಕಾರ್ಯಕ್ರಮ, ಪಂಚಾಮೃತ ಅಭಿಷೇಕ, ಹೋಮ, ಹವನ ಹಾಗೂ ಭಕ್ತರಿಂದ ದೇವಾಲಯಕ್ಕೆ ಮತ್ತು ದೇವಿಗೆ ಹೂವಿನ ಅಲಂಕಾರ ಮಾಡಿಸಲಾಗಿತ್ತು. ಮಧ್ಯಾಹ್ನ 1ಗಂಟೆಗೆ ಬ್ರಹ್ಮ ರಥೋತ್ಸವ, ಸಂಜೆ ಲಕ್ಷ ದಿಪೋತ್ಸವ ಕಾರ್ಯಕ್ರಮ ಮತ್ತು ರಾತ್ರಿ 8ಗಂಟೆಗೆ ಮುತ್ತಿನ ಪಲ್ಲಕ್ಕಿ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ,…
ತುಮಕೂರು: ದೇಶದಲ್ಲಿರುವ ಎಲ್ಲ ವರ್ಗದ ಜನರೂ ನಾವೆಲ್ಲ ರೈತರು ಎಂದು ಹೇಳಿಕೊಳ್ಳಬೇಕಾದ ಅಗತ್ಯ ಒದಗಿಬಂದಿದೆ. ಇಲ್ಲದಿದ್ದರೆ ನಮಗೆ ಉಳಿಗಾಲವಿಲ್ಲವಾಗಿದೆ ಎಂದು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಕಳವಳ ವ್ಯಕ್ತಪಡಿಸಿದ್ದಾರೆ. ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕ ವತಿಯಿಂದ ತುಮಕೂರು ನಗರದ ಮಾಕಂ ಕಲ್ಯಾಣ ಮಂದಿರದಲ್ಲಿ ಡಿಸೆಂಬರ್ 8ರಂದು ನಡೆದ ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ ವಿಷಯ ಕುರಿತು ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತ ವರ್ಗವನ್ನು ವಿಸ್ತರಿಸಬೇಕಾಗಿದೆ. ರೈತರು ಎಂಬ ಪದದ ವ್ಯಾಪ್ತಿಯಲ್ಲಿ ಭೂರಹಿತರೈತರು, ಗೇಣಿರೈತರು, ಭೂಮಿ ಇರುವ ರೈತರು, ರೈತ ಮಹಿಳೆಯರು, ಆದಿವಾಸಿ ರೈತರು, ಕೂಲಿ ಮಾಡುವ ರೈತರು ಹೀಗೆ ರೈತರ ನೆಲೆಯನ್ನು ವಿಸ್ತರಿಸುತ್ತ ಹೋಗಬೇಕು. ಆಮೂಲಕ ರೈತರಿಗೆ ಬೆಂಬಲಕ್ಕೆ ನಿಲ್ಲಬೇಕಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಬರಹಗಾರರು, ವೈದ್ಯರು ಸಾಹಿತಿಗಳ ಎದುರು ಹಲವಾರು ಸವಾಲುಗಳು ಇವೆ. ಇತ್ತೀಚಿನ ದಿನಗಳಲ್ಲಿ ನಮ್ಮ ಅಭಿವ್ಯಕ್ತಿಗೆ ಆತಂಕ ಸೃಷ್ಟಿಯಾಗಿದೆ.…
ತುಮಕೂರು: ಕನ್ನಡದಂತಹ ಸುಂದರ ಲಿಪಿಯುಳ್ಳ ಭಾಷೆ ಇನ್ನೊಂದಿಲ್ಲ. ಇಂಗ್ಲೀಷ್ ಎಂಬುದು ಕೇವಲ ಮೋಹಕ ಭಾಷೆಯಾಗಿದೆ. ಪ್ರಪಂಚದ ಸುಮಾರು ದೇಶಗಳಲ್ಲಿ ಇಂಗ್ಲಿಷ್ ಎಂಬ ಪದವೇ ತಿಳಿದಿಲ್ಲ. ಇಂಗ್ಲಿಷ್ ಕಲಿತರೆ ಪ್ರಪಂಚದ ಎಲ್ಲಾ ದೇಶಗಳನ್ನು ಸುತ್ತಿಬರಬಹುದು ಎಂಬ ಜನರ ನಂಬಿಕೆ ಸುಳ್ಳು ಎಂದು ನಾಡೋಜ ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟರು. ನಗರದ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಬಾಪೂಜಿ ವಿದ್ಯಾಸಂಸ್ಥೆ, ಜಿಲ್ಲಾ ಸರ್ವೋದಯ ಮಂಡಲ, ಚಿಕ್ಕನಾಯಕನಹಳ್ಳಿಯ ಶೃಂಗಾರ ಪ್ರಕಾಶನ ಪ್ರತಿಷ್ಠಾನ ವತಿಯಿಂದ ಬಾ,ಬಾಪೂ 150ನೇ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ನನ್ನ ಕನಸಿನ ಭಾರತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾತನಾಡಿದರು. ಇಂದು ಪ್ರತಿಯೊಬ್ಬರಲ್ಲೂ ಆಂಗ್ಲಭಾಷೆ ಕಲಿಯಬೇಕು. ಅದನ್ನು ಕಲಿತರೆ ಪ್ರಪಂಚದ ಯಾವುದೇ ಮೂಲೆಗೋದರೂ ಜೀವನ ಮಾಡಬಹುದು ಎಂದುಕೊಂಡಿದ್ದಾರೆ. ಅದು ಶುದ್ಧ ಸುಳ್ಳು, ಜಪಾನ್, ಫ್ರಾನ್ಸ್ ನಂತರ ಸುಮಾರು ದೇಶಗಳಲ್ಲಿ ಆಂಗ್ಲ ಭಾಷೆಯ ಪರಿಜ್ಞಾನವೇ ಇಲ್ಲ. ಕೇವಲ ನಮ್ಮ ಭಾರತದಲ್ಲಿ ಮಾತ್ರವೇ ಆಂಗ್ಲ ಭಾಷೆಗೆ…
ತುಮಕೂರು : ಶುಕ್ರವಾರ ಸಂಜೆ ನಗರದ ಗಾಜಿನ ಮನೆಯಲ್ಲಿ ಅದ್ದೂರಿಯಾಗಿ ನಡೆದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಆಳ್ವಾಸ್ ಪ್ರತಿಷ್ಠಾನ ಕಲಾತಂಡಗಳು ಪ್ರಸ್ತುತಪಡಿಸಿದ ಸಾಂಸ್ಕøತಿಕ ವೈಭವವು ಪ್ರೇಕ್ಷಕನ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಯುವ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಈ ಯುವಜನೋತ್ಸವ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಉದ್ಘಾಟಿಸಿದ ನಂತರ ಜರುಗಿದ ಮೂಡಬಿದರೆಯ ಆಳ್ವಾಸ್ ಪ್ರತಿಷ್ಠಾನದ ಸಾಂಸ್ಕøತಿಕ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ಪ್ರೇಕ್ಷಕನನ್ನು ಮೈಮರೆಯುವಂತೆ ಮಾಡಿದವು. ದೇಶದ ವಿವಿಧ ರಾಜ್ಯಗಳಲ್ಲದೆ ದೂರದ ಶ್ರೀಲಂಕಾ ದೇಶದ ನೃತ್ಯ ಪರಂಪರೆಗಳ ಮಿಳಿತವಾಗಿದ್ದ ಈ ಸಾಂಸ್ಕತಿಕ ವೈಭವದದಲ್ಲಿ ಉತ್ತರ ಭಾರತದ “ಕಥಕ್”ನಿಂದ ಹಿಡಿದು ದಕ್ಷಿಣ ಭಾರತದ “ಮೋಹಿನಿ ಅಟ್ಟಂ” ಹಾಗೂ ಪೂರ್ವದ ಗುಜರಾತಿನ “ದಾಂಡಿಯಾ ನೃತ್ಯ”ದಿಂದ ಹಿಡಿದು ಪಶ್ಚಿಮ ಬಂಗಾಳದ “ಪುರಲಿಯೋ ಚಾವೋ ನೃತ್ಯ”ದವರೆಗೆ ವಿವಿಧ ರಾಜ್ಯಗಳ ಕಲೆಗಳನ್ನು ಅನಾವರಣಗೊಳಿಸಲಾಯಿತು.…
ತುಮಕೂರು: ನಗರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಯುವಜನೋತ್ಸವದ 2ನೇ ದಿನವಾದ ಶನಿವಾರ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಮೂಲ ಜನಪದ ಕುಣಿತ, ಸ್ಥಳೀಯ ಕಲೆ ಹಾಗೂ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಿತು. ರಾಜ್ಯದ 30 ಜಿಲ್ಲೆಗಳ ತಂಡಗಳು ಕಲಾ ಪ್ರದರ್ಶನ ನೀಡಿದವು. ಸೋಮನಕುಣಿತ, ಡೊಳ್ಳುಕುಣಿತ, ಪಟ ಕುಣಿತ, ವೀರಗಾಸೆ, ಕುದುರೆ ಕೋಲು, ನಂದಿ ಕುಣಿತದ ಪ್ರಕಾರಗಳನ್ನು ಯುವಜನೋತ್ಸವದಲ್ಲಿ ತಂಡಗಳು ಪ್ರದರ್ಶಿಸಿದವು. ಚಾಮರಾಜನಗರ ಜಿಲ್ಲೆಯ ತಂಡ ಪ್ರದರ್ಶಿಸಿದ ನೃತ್ಯ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಡೊಳ್ಳುಕುಣಿತದಲ್ಲಿ ಒಬ್ಬರ ಮೇಲೆ ಒಬ್ಬರು ನಿಂತು ನೃತ್ಯ ಪ್ರದರ್ಶಿಸಿದ್ದು, ನೋಡುಗರ ಕಣ್ಮನ ಸೆಳೆಯಿತು. ಗಾಜಿನ ಮನೆಯಲ್ಲಿ ನಡೆಯುತ್ತಿರುವ ಜನಪದ ಕುಣಿತ ಸ್ಪರ್ಧೆಯಲ್ಲಿ ಅಂತಿಮ ಹಂತಕ್ಕೆ ಆಯ್ಕೆಯಾದ ತಂಡಗಳು ಭಾನುವಾರ ತಮ್ಮ ಪ್ರದರ್ಶನವನ್ನು ನೀಡಲಿದ್ದು, ಭಾನುವಾರ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ತಂಡವನ್ನು ಘೋಷಣೆ ಮಾಡಲಾಗುವುದು. ಯುವಜನರಲ್ಲಿ ಉತ್ಸಾಹ: ನಶಿಸಿ ಹೋಗುತ್ತಿರುವ ಜನಪದ…
ತುಮಕೂರು: ಶಾಲೆ ಮುಗಿಸಿ, ರಸ್ತೆ ದಾಟುತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು 9ನೇ ತರಗತಿಯ ಬಾಲಕ ಸ್ಥಳದಲ್ಲಿಯ ಸಾವನ್ನಪ್ಪಿದ ಘಟನೆ ನಡೆದಿದ್ದು, ಇದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರ ನಿರ್ಲಕ್ಷವೇ ಕಾರಣ ಎಂದು ಶಿಕ್ಷಕರ ವಿರುದ್ದ ಬಾಲಕನ ಪೋಷಕರು ಹಾಗೂ ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಹೊನ್ನುಡಿಕೆ ಹ್ಯಾಂಡ್ಪೋಸ್ಟ್ ಬಳಿ ಇರುವ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಧನುಷ್ ಇಂದು ಶನಿವಾರದ ಶಾಲೆ ಮುಗಿಸಿಕೊಂಡು ರಸ್ತೆ ದಾಟುವ ವೇಳೆ ತುಮಕೂರು ಕಡೆಯಿಂದ ಬಂದ ಕಾರೊಂದು ಸೈಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇದೇ ಜಾಗದಲ್ಲಿ ನಡೆಯುತ್ತಿರುವ ಮೂರನೇ ಅಪಘಾತ ಇದಾಗಿದ್ದು, ಪದೇ ಪದೇ ಅಪಘಾತವಾಗಲು ಶಾಲೆಯ ಮುಖ್ಯೋಪಾಧ್ಯಾಯರ ನಿರ್ಲಕ್ಷವೇ ಕಾರಣ ಎಂದು ಮೃತ ಬಾಲಕನ ಪೋಷಕರು ಹಾಗೂ ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯಕರ್ತರು ಶಾಲೆಯ ಬಳಿ ಪ್ರತಿಭಟನೆ ನಡೆಸಿದರು.…